ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.

ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.

ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.

ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.

ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.

ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…