News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

564

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…