ಸ್ಪೂರ್ತಿ

ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

389

ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ.

ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸರಿ ಎಂಬುದು ಕೆಲವರ ವಾದವಾಗಿತ್ತು ಆದರೆ ಒಬ್ಬ ಸಾಮಾನ್ಯ ಹುಡುಗ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತನ್ನ ಜೀವನವನ್ನ ರೂಪಿಸಿಕೊಂಡ.

ಆ ವ್ಯಕ್ತಿಯೇ ರಘುವೀರ್ ಚೌದ್ರಿ ಇವನು ಹುಟ್ಟಿ ಬೆಳೆದದ್ದೆಲ್ಲ ರಾಜಸ್ಥಾನದ ಜೈಪುರ್ ಅಲ್ಲಿ, ಮನೆಯಲ್ಲಿ ಬಹಳ ಬಡತನವಿದ್ದ ಕಾರಣ ತನ್ನ ವಿದ್ಯಾಭ್ಯಾಸವನ್ನ ಅರ್ಧದಲ್ಲೇ ನಿಲ್ಲಿಸಬೇಕಾಯಿತು. ದುಡ್ಡಿನ ಅವಶ್ಯಕತೆ ಬಹಳಷ್ಟಿದಿದ್ದರಿಂದ ಅಮೆಜಾನ್ ಕಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ. ಆದ್ರೆ ಅವನ್ ಬಳಿ ಬೈಕ್ ಇಲ್ಲದ ಕಾರಣ ಸೈಕಲ್ ಬಳಸಿ ಸಾಮಾನುಗಳನ್ನ ಗ್ರಾಹಕರಿಗೆ ಸಾಗಿಸುತ್ತಿದ್ದ.

ಸೈಕಲ್ ತುಳಿದು ತುಳಿದು ಸುಸ್ತಾಗಿ ಟೀ ಕುಡಿಯಲು ಹೋಗುತಿದ್ದ ಆದರೆ ಯಾವ ಅಂಗಡಿಯಲ್ಲೂ ಚನ್ನಾಗಿ ರುಚಿಕರವಾದ ಟೀ ಸಿಗುತ್ತಿರಲಿಲ್ಲ, ಆಗ ನನ್ನ ಹಾಗೆಯೇ ದಿನವಿಡೀ ಕಷ್ಟಪಟ್ಟು ದುಡಿದು ಒಂದು ಲೋಟ ರುಚಿಯಾದ ಟೀಗೋಸ್ಕರ ಹಪಹಪಿಸುವ ಎಷ್ಟೋ ಜನ ಇರುತ್ತಾರೆ ಎಂದು ಯೋಚಿಸಿದ.

ಟೀ ಮಾಡುವುದನ್ನೇ ಒಂದು ಬ್ಯುಸಿನೆಸ್ ಮಾಡಬೇಕು ಅಂತ ರಘುವೀರ್ ಗೆ ಅನಿಸಿತು. ತನ್ನ 3 ಜನ ಸ್ನೇಹಿತರ ಜೊತೆ ಸೇರಿ ಟೀ ಬ್ಯುಸಿನೆಸ್ ಪ್ರಾರಂಭಿಸಿದ ರಘುವೀರ್. ತನಗೆ ಗೊತ್ತಿರೋ ಜನರ ಮೂಲಕ 100 ಟೀ ಅಂಗಡಿ ಮಾಲೀಕರನ್ನ ಕಲೆಹಾಕಿಕೊಂಡ.

ಅವನ ಈ ಬ್ಯುಸಿನೆಸ್ ಎಷ್ಟು ಲಾಭ ತಂದಿದೆ ಎಂದರೆ ಈಗ ಅವನು ತಾನು ಸಂಪಾದಿಸಿದ ದುಡ್ಡಿನಲ್ಲಿಯೇ ಒಂದು ಬೈಕ್ ಕೊಂಡುಕೊಂಡಿದ್ದಾನೆ. ಅವನ್ ಬ್ಯುಸಿನೆಸ್ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಎಂದರೆ ಅವನ ಕಂಪನಿ ದಿನಕ್ಕೆ 500 ರಿಂದ 700 ಆರ್ಡರ್ಗಳನ್ನ ಪೂರೈಸುತ್ತದೆ. ಇವನು ಈಗ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಪಾದಿಸುತ್ತಾನೆ, ಹಾಗೂ ಈ ಬ್ಯುಸಿನೆಸ್ಗಾಗಿ ೪ ಬೈಕ್ಗಳನ್ನ ಸಹ ತೆಗೆದುಕೊಂಡಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…