ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ.
ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.
ಈ ಸಂದರ್ಭದಲ್ಲಿ ಆತ ಪತ್ರವೊಂದನ್ನು ಬರೆದಿಟ್ಟಿದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಎರಡು ರಾಜ್ಯಗಳಲ್ಲಿಯೂ ಪ್ರಾಮಾಣಿಕರಾಗಿರುವ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಆತ ಬರೆದಿಟ್ಟಿರುವುದಾಗಿ ಬಂಜಾರ ಹಿಲ್ಸ್ ಇನ್ಸ್ ಪೆಕ್ಟರ್ ಗೋವಿಂದ ರೆಡ್ಡಿ ಹೇಳಿದ್ದಾರೆ.
ಶ್ರೀನಗರ ಕಾಲೋನಿಯ ವೆಂಕಟೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂತರ ಮಹೇಶ್ ಓಸ್ಮಾನಿಯಾ ಆಸ್ಪತ್ರೆಗೆ ದೌಡಾಯಿಸಿದ್ದು, ಚಿಕಿತ್ಸೆ ಪಡೆದಿದ್ದಾನೆ. ಆತನ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
2009ರ ಚುನಾವಣೆ ಸಂದರ್ಭದಲ್ಲೂ ನಾಗೇಶ್ ಇದೇ ರೀತಿ ಮಾಡಿದ್ದ ಎನ್ನಲಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್ . ರಾಜಶೇಖರ ರೆಡ್ಡಿ ಅವರ ನಿಷ್ಠಾವಂತ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ತುಂಡಿಸಿದ ನಾಲಿಗೆಯನ್ನು ತ್ಯಾಗ ಮಾಡಿರುವುದಾಗಿ ಹೇಳಿಕೆ ನೀಡಿದ್ದ. 2004ರ ಚುನಾವಣೆ ಸಂದರ್ಭದಲ್ಲೂ ಆತ ಇದೇ ರೀತಿಯಲ್ಲಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ತೆಲಂಗಾಣದಲ್ಲಿ ನಾಳೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…