ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇದ್ದರೆ ಇದನ್ನು ಓದಿ..ಮರೆಯದೇ ಶೇರ್ ಮಾಡಿ..

803

ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…

ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.

ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು  ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.

ಇದಕ್ಕೆ ಪೂರಕ  ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ  ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ  ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸಿದರೆ ಸಕ್ಕರೆ ಕಾಯಿಲೆ ಖಂಡಿತಾ :-

ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.

ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್  ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.

ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು  ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು  ಕೂಡ ಪರಿಣಾಮ ಬೀರುತ್ತಿವೆ.

ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ  ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.

ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ  ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ  ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.

ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

    ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್…

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…