ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…