ಸುದ್ದಿ

ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

235

ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.

ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸುದ್ದಿ

    ವೆಹಿಕಲ್ ಬಿಟ್ಟು ಇನ್ಮುಂದೆ ವಾಕಿಂಗ್ ಸ್ಟಾರ್ಟ್ ಮಾಡಿ ಈ ಆ್ಯಪ್‌ಗಳೇ ನಿಮ್ಮಗೆ ದುಡ್ಡು ಕೊಡುತ್ತದೆ,.!

    ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್‌ಗಳು. ಮತ್ತೇಕೆ ತಡ? ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ 4 ರೋಗಗಳನ್ನು ಗುಣಪಡಿಸುವ ಅದ್ಭುತ ಶಕ್ತಿ ಈ ಸೊಪ್ಪಿನಲ್ಲಿದೆ..!

    ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.