ಸುದ್ದಿ

ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

238

ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ.

ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ ಹಲವು ಅಹಿತಕರ ಘಟನೆಗಳು ಕೂಡ ಈ ಹಿಂದೆ ಸಂಭವಿಸಿದೆ. ಅಲ್ಲದೆ ಪ್ರದೇಶದಲ್ಲಿ ಹೊಸ ವರ್ಷ ಆಚರಣೆಗೆಂದು ಬರುವ ಪುಂಡ ಪೋಕರಿಗಳಿಗೆ ಕಡಿವಾಣ ಹಾಕಬೇಕೆಂದು ಇಲ್ಲಿನ ಆಡಳಿತ ಮಂಡಳಿ ಹೊಸ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಬಾರಿ ಮುತ್ತತ್ತಿಯಲ್ಲಿ ಪ್ರವಾಸಿಗರು ಹೊಸ ವರ್ಷ ಆಚರಣೆಗೆ ಬರುವಂತಿಲ್ಲ. ಹೌದು, ಡಿಸೆಂಬರ್ 31 ರ ಬೆಳಗ್ಗೆ 6 ಗಂಟೆಯಿಂದ 2019 ಜನವರಿ 1ರ ಮಧ್ಯರಾತ್ರಿವರೆಗೂ ಪ್ರವಾಸಿಗರ ಪ್ರವೇಶವನ್ನು ಮುತ್ತತ್ತಿಯಲ್ಲಿ ನಿಷೇಧಿಸಲಾಗಿದೆ.

ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಕಳೆದ ಕೆಲವು ವರ್ಷಗಳಿಂದ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದನ್ನು ತಡೆಯಬೇಕು ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆ ಮುತ್ತತ್ತಿಯಲ್ಲಿ ಪ್ರವಾಸಿಗರನ್ನು ಹೊಸ ವರ್ಷ ಆಚರಣೆಗೆ ಬಿಡಬಾರದು ಎಂದು ಅಲ್ಲಿನ ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು.

ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ಮೋಜು ಮಸ್ತಿ ವೇಳೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಪ್ರವಾಸಿಗರ ಹಿತದೃಷ್ಟಿಗಾಗಿ ಮುತ್ತತ್ತಿಗೆ ಹೊಸ ವರ್ಷದ ವೇಳೆ ಪ್ರವಾಸಿಗರಿಗೆ ನಿಷೇಧ ಹೇರಿ ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರು ಪೊಲೀಸರ ಮನವಿಗೆ ಸಮ್ಮತಿಸಿ ಆದೇಶ ಹೊರಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…