ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…