ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.