News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Sports, ಕ್ರೀಡೆ

ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

871

‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ.  ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.

ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್​ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್​ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್​ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್​ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್​ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.

ಪಾಕ್​ನ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್​ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.

ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.

ಭಾರತ ನಂ. 1 

ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.

ಭಾರತ ಗೆದ್ದರೆ….

  • ಸತತ 2 ಬಾರಿ ಟ್ರೋಫಿ ಗೆದ್ದ ಆಸೀಸ್ ದಾಖಲೆ ಸಮ
  • ಒಟ್ಟಾರೆ 3 ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ದಾಖಲೆ
  • ಭಾರತಕ್ಕೆ 6ನೇ, ನಾಯಕ ಕೊಹ್ಲಿಗೆ ಚೊಚ್ಚಲ ಐಸಿಸಿ ಪ್ರಶಸ್ತಿ
  • ಕೋಚ್ ಅನಿಲ್ ಕುಂಬ್ಳೆಗೆ ಚೊಚ್ಚಲ ಐಸಿಸಿ ಟ್ರೋಫಿ
  • ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೆ ಬಡ್ತಿ

ಪಾಕಿಸ್ತಾನ ಗೆದ್ದರೆ…

  • ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಾಧನೆ
  • ಐಸಿಸಿಯ ಎಲ್ಲ ಪ್ರಶಸ್ತಿ ಗೆದ್ದ ನಾಲ್ಕನೇ ತಂಡ ಎನ್ನುವ ಸಾಧನೆ
  • 1992ರ ಬಳಿಕ ಮೊದಲ ಐಸಿಸಿ ಏಕದಿನ ಪ್ರಶಸ್ತಿ ಗೆಲುವು
  • 2009ರ ಬಳಿಕ ಮೊದಲ ಬಾರಿ ಐಸಿಸಿ ಟೂರ್ನಿ ಚಾಂಪಿಯನ್
  • ಭಾರತ ವಿರುದ್ಧ ಲೀಗ್ ಸೋಲಿಗೆ ಸೇಡು ತೀರಿಸಿದ ಸಮಾಧಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…