ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…