News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
inspirational

ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

773

ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

ಯಾವುದನ್ನೂ ವಿಜೃಂಭಿಸದೆ, ವಾಸ್ತವ ಎಷ್ಟೇ ಕಠೋರವಾಗಿದ್ದರೂ, ಜನರ ನಂಬಿಕೆಗೆ ವಿರುದ್ಧವಾಗಿದ್ದರೂ, ಆಡಳಿತ ಮಾಡುವವರ ಮರ್ಜಿಗೆ ಒಳಗಾಗದೆ ಸತ್ಯದ ಪರ ನಿಷ್ಠೆಯನ್ನು ಹೊಂದಿದ್ದರು. ಆಗಲೂ ಅಪರೂಪಕ್ಕೆ ಕೆಲವು ಭಟ್ಟಂಗಿಗಳು ಇದ್ದರೂ ಎಲ್ಲಿಯೂ ಸಭ್ಯತೆಯ ಎಲ್ಲೆ ಮೀರುತ್ತಿರಲಿಲ್ಲ.

ಅಕ್ಷರಗಳ ಮುಖಾಂತರ ಕ್ರಾಂತಿಯನ್ನೇ ಮಾಡಲಾಯಿತು. ಆಗಲೇ “ಖಡ್ಗಕ್ಕಿಂತ ಲೇಖನಿ ಹರಿತ ” ಎಂಬ ನಾಣ್ಣುಡಿ ನಿಜವಾಗಿ ಆಚರಣೆಯಲ್ಲಿತ್ತು.

ಕೈ ಬರಹದ ಪತ್ರಿಕೋದ್ಯಮ ಓದುಗರ ನರನಾಡಿಗಳಲ್ಲಿ ರೋಮಾಂಚನ ಉಂಟುಮಾಡುತ್ತಿತ್ತು. ಮನಸ್ಸಿಗೆ ನಾಟುತ್ತಿತ್ತು. ತದನಂತರ ಆಧುನಿಕ ಬೆಳವಣಿಗೆಯೊಂದಿಗೆ ಮುದ್ರಣವೂ, ಆಮೇಲೆ ಆಕಾಶವಾಣಿ ಸುದ್ದಿ ಮಾಧ್ಯಮಗಳು, ಟಿವಿ ಮಾಧ್ಯಮಗಳು, ಅಂತರ್ಜಾಲ ವೆಬ್ ಪೋರ್ಟಲ್ ಗಳು ಅಭಿವೃದ್ಧಿ ಹೊಂದಿದವು ಮತ್ತು ಅತ್ಯಂತ ವೇಗವಾಗಿ ಜನಸಮೂಹವನ್ನು ಆಕ್ರಮಿಸಿಕೊಂಡವು.

ಪತ್ರಕರ್ತರೆಂದರೆ ವಿಶೇಷ ಬುದ್ಧಿಶಕ್ತಿಯ ಆಡಳಿತದ ಕಾವಲುಗಾರರು, ಸಮಾಜದ ಮಾರ್ಗದರ್ಶಕರು, ಜನಾಭಿಪ್ರಾಯ ರೂಪಿಸುವ ಚಿಂತಕರು ಎಂದೇ ಭಾವಿಸಲಾಗಿತ್ತು ಮತ್ತು ಅಪಾರ ಗೌರವವನ್ನು ನೀಡಲಾಗುತ್ತಿತ್ತು.

ಆದರೆ, ಅದೇ ಮಾತುಗಳನ್ನು ಈಗಿನ ಟಿವಿ ಮಾಧ್ಯಮಗಳ ಬಗ್ಗೆ ಹೇಳಲು ಸಾಧ್ಯವೇ ?

ಸುದ್ದಿಗಳೊಂದಿಗೆ ಪೆಟ್ರೋಲ್ ಮತ್ತು ಬೆಂಕಿ ಕಡ್ಡಿಯನ್ನು ಜೊತೆಯಲ್ಲಿಯೇ ತಂದಿರುತ್ತಾರೆ.

ಈ ಕ್ಷಣದಲ್ಲಿ ಪಾಕಿಸ್ತಾನದ ಮಾಧ್ಯಮಗಳು ಭಾರತ ಮತ್ತು ಅದರ ಪ್ರಧಾನಿಯನ್ನು ಟೀಕಿಸಲು ಬಳಸದ ಕೆಟ್ಟ ಪದವೇ ಇಲ್ಲ. ಸುಳ್ಳು ಸಹ ಇವರ ಕಾಟಕ್ಕೆ ಅವಮಾನದಿಂದ ನೇಣು ಹಾಕಿಕೊಂಡಿತು.

ಹಾಗೆಯೇ ಭಾರತ ಪತ್ರಕರ್ತರು ಸಹ ಅವರಂತೆಯೇ ವರ್ತಿಸುತ್ತಿದ್ದಾರೆ. ಸತ್ಯ ಮತ್ತು ವಾಸ್ತವದ ವಿಮರ್ಶಾತ್ಮಕ ಸುದ್ದಿಗಳನ್ನು ಮರೆತು ಜನರ ಭಾವನೆಗಳು ಮತ್ತು ಜನಪ್ರಿಯತೆಯ ಬಾಲ ಹಿಡಿದು ಸತ್ಯವನ್ನು ಸಮಾಧಿ ಮಾಡುತ್ತಿವೆ.

ಪ್ರಾಣವನ್ನು ಧೈರ್ಯವಾಗಿ ದೇಶಕ್ಕಾಗಿ ಸಮರ್ಪಿಸುತ್ತಿರುವ ಸೈನಿಕರ ತ್ಯಾಗ ಬಲಿದಾನಗಳ ಈ ಸಂಧರ್ಭದಲ್ಲಿ ಅದಕ್ಕೊಂದು ಅರ್ಥ ನೀಡಿ ಅತ್ಯಂತ ವಿವೇಚನೆಯಿಂದ ವಿಷಯಗಳನ್ನು ವಿಮರ್ಶಿಸಿ ಶಾಂತಿಯ ಸಂದೇಶಗಳನ್ನು ಎರಡೂ ಕಡೆ ಹಬ್ಬಿಸುತ್ತಾ, ಜನಾಭಿಪ್ರಾಯ ರೂಪಿಸಿ,ಆಡಳಿತಗಾರರ ಕಣ್ಣು ತೆರೆಸಿ, ಯುದ್ಧ ಮತ್ತು ಹಿಂಸೆಯ ಭೀಕರ ಪರಿಣಾಮ ಮತ್ತು ಅದರ ನಿರರ್ಥಕತೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುವುದನ್ನು ಬಿಟ್ಟು ಸಂಪೂರ್ಣ ಅದಕ್ಕೆ ವಿರುದ್ಧವಾಗಿ ಮಾಡುತ್ತಿವೆ.

ರಾಜಕಾರಣಿಗಳನ್ನು ಟೀಕಿಸುತ್ತಾ, ಶಾಂತಿ ಸೌಹಾರ್ದತೆಯ ಪ್ರತಿಪಾದಕರನ್ನು ಹೇಡಿಗಳಾಗಿ ಚಿತ್ರಿಸುತ್ತಾ, ಸಂಯಮಿಗಳನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಾ ಇಡೀ ಜನಾಭಿಪ್ರಾಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳತೊಡಗಿದ್ದಾರೆ.

ಇದೇ ನೋಡಿ ವಿಪರ್ಯಾಸ. ಅಭಿವ್ಯಕ್ತಿ ಸ್ವಾತಂತ್ರ್ಯ ಸ್ವೇಚ್ಚೆಯಾಗುವ ಅಪಾಯ ಎಲ್ಲರೂ ಊಹಿಸಿದ್ದರು. ಆದರೆ ಅದು ಸರ್ವಾಧಿಕಾರಿಯಾಗಿ ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿ ಆಹುತಿ ತೆಗೆದುಕೊಳ್ಳುತ್ತದೆ ಎಂದು ಯಾರಿಗೂ ಅನಿಸಿರಲಿಲ್ಲ.

ಸತ್ಯದ ಕತ್ತು ಹಿಸುಕಿ ಅದರ ಸಮಾಧಿಯ ಮೇಲೆ ಸುಳ್ಳಿನ ಅಡಿಪಾಯ ಹಾಕಿ ಭ್ತಮಾಲೋಕದ ಅರಮನೆ ಕಟ್ಟಿ, ಅಮಾನವೀಯ ಬಣ್ಣ ಬಳಿದು ಇಡೀ ಸಮಾಜವನ್ನು ನಿಧಾನವಾಗಿ ವಿಷಪೂರಿತ ಮಾಡುತ್ತಿದೆ.

ನಿರೂಪಕರೆಂಬ ಮತಿಹೀನರು ವಿಷಯಗಳ ಆಳ ಅಗಲಗಳ ಬಗ್ಗೆ ಯಾವುದೇ ಜ್ಞಾನ ಇಲ್ಲದವರು ಬಾಯಿಗೆ ಬಂದಂತೆ ಮಾತನಾಡುತ್ತಾ, ಮಾತಿನಲ್ಲೇ ಬೀದಿ ಬದಿಯ ಕುಡುಕರಿಗಿಂತ ಕೆಟ್ಟದ್ದಾಗಿ ವರ್ತಿಸುತ್ತಾ ಸಮೂಹ ಸನ್ನಿಗೆ ಒಳಗಾಗಿದ್ದಾರೆ. ರೌಡಿಗಳು, ಕ್ರಿಮಿನಲ್ ಗಳು ಸಹ ಅಪರಾಧ ಎಸಗುವ ಮುನ್ನ ಹಲವಾರು ಬಾರಿ ಯೋಚಿಸುತ್ತಾರೆ. ಆದರೆ ಈ ಟಿವಿ ಮಾಧ್ಯಮದವರು ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ.

ಪುರಾಣ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ ಮುಂತಾದ ಯಾವ ವಿಷಯಗಳನ್ನು ತಿಳಿಯದೆ ಈ ಕ್ಷಣದ ಮಾಹಿತಿಯನ್ನೇ ಸತ್ಯ ಎಂದು ಬಿಂಬಿಸುತ್ತಿದ್ದಾರೆ.

ಈಗಾಗಲೇ ಅವರ ಬಣ್ಣ ಬಯಲಾಗಿದೆ. ಅದರೂ ಅವರು ಶಿಥಿಲವಾಗುವ ಮುನ್ನ ಮಾಡಬಹುದಾದ ಅಪಾಯಕಾರಿ ಕೆಲಸಗಳ ಪರಿಣಾಮ ಬಹಳ ಕಾಲ ಉಳಿಯುತ್ತದೆ.

ಆದ್ದರಿಂದ ಜನ ಸಾಮಾನ್ಯರಾದ ನಾವುಗಳು ವಿವೇಚನೆಯಿಂದ ತಾಳ್ಮೆಯಿಂದ ಸುದ್ದಿ ಮತ್ತು ಅದರ ಹಿನ್ನೆಲೆಯನ್ನು ಗ್ರಹಿಸಿ ನಮ್ಮ ಅಭಿಪ್ರಾಯ ರೂಪಿಸಿಕೊಳ್ಳೋಣ. ಅದರ ಆಧಾರದ ಮೇಲೆ ಚರ್ಚೆ ಮಾಡೋಣವೇ ಹೊರತು ಈ ಟಿವಿ ಮಾಧ್ಯಮಗಳ ಪ್ರಭಾವಕ್ಕೆ ಒಳಗಾಗಿ ಜಗಳವೇ ಚರ್ಚೆ ಎಂಬ ತಪ್ಪು ಕಲ್ಪನೆ ತಿರಸ್ಕರಿಸೋಣ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.
ವಿವೇಕಾನಂದ ಹೆಚ್. ಕೆ.

About the author / 

Chethan Ram

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಆರೋಗ್ಯ

    ಈರುಳ್ಳಿ ಸಿಪ್ಪೆಯ ನಂಬಲೂ ಸಾಧ್ಯವಿಲ್ಲದ ಉಪಯೋಗಗಳ ನಿಮ್ಗೆ ಗೂತ್ತಾ..?ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…