ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…