News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ವಿಧ್ಯಾಭ್ಯಾಸ

ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

55

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.


ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ ಗುರುವಾರವಷ್ಟೇ ತಿಳಿದಿತ್ತು. ಇದರಿಂದ ವಿದ್ಯಾರ್ಥಿಗೆ ಅನಾನುಕೂಲವಾಗದಿರಲೆಂದು ನಾವು ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮುಂದೂಡಲು ಕೇಳಿದೆವು” ಬೆಂಗಳುರಿನ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯರೊಬ್ಬರು ಹೇಳಿದ್ದಾರೆ.


ಭವಿಷ್ಯದ ಶೈಕ್ಷಣಿಕ ಹಾಗೂ ಔದ್ಯೋಗಿಕ ಜೀವನಕ್ಕೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 40,000 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ 8.4 ಲಕ್ಷ ವಿದ್ಯಾರ್ಥಿಗಳ ಪೈಕಿ 2.26 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ.ಇದರಲ್ಲಿ ಕೇವಲ 1.8 ಲಕ್ಷ ವಿದ್ಯಾರ್ಥಿಗಳು ಮಾತ್ರ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಎಸ್ಇಇಬಿ ನಿರ್ದೇಶಕಿ ಸುಮಂಗಲಾ ಪತ್ರಿಕೆಗೆ ತಿಳಿಸಿದ್ದಾರೆ.


“ಉತ್ತರಪತ್ರಿಕೆ ಮರುಮೌಲ್ಯಮಾಪನ ದಿನಾಂಕಗಳಿಗೆ ಯಾವ ಬದಲಾವಣೆ ಮಾಡಲಾಗಿಲ್ಲ.ಜೂನ್ ನಲ್ಲಿ ಪೂರಕ ಪರೀಶ್ಖೆ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ನಿರ್ವಹಿಸಲಾಗಿದೆ.” ಅವರು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ