News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

92

ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…