ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…