ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ ಈ ಸೇವೆ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕಂಪನಿಯ ಮೂಲಗಳನ್ನು ಆಧರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಆರಂಭದಲ್ಲಿ ಉಚಿತ:

ಜಿಯೋ ಸೇವೆ 2016ರ ಸೆಪ್ಟೆಂಬರ್ ತಿಂಗಳಿನಲ್ಲಿ ಆರಂಭಗೊಂಡ ಮೂರು ತಿಂಗಳು ಉಚಿತ ಸೇವೆ ನೀಡಿತ್ತು. ಜಿಯೋ ಫೈಬರ್ ಕೂಡ ಒಂದು ವರ್ಷ ಉಚಿತವಾಗಿ ಸಿಗಲಿದೆ. ಲ್ಯಾಂಡ್ಲೈನ್ನಲ್ಲಿ ಹೊರ ಹೋಗುವ ಎಲ್ಲ ಕರೆಗಳು ಉಚಿತವಾಗಿ ನೀಡಲಿದೆ. ಲ್ಯಾಂಡ್ಲೈನ್ ಮತ್ತು ಟಿವಿ ವಾಹಿನಿ ಸೇವೆಗಳು ಮೂರು ತಿಂಗಳಿನಲ್ಲಿ ಸೇರ್ಪಡೆಯಾಗಲಿದೆ. ಈಗಾಗಲೇ ಟಿವಿ ವೀಕ್ಷಣೆಗೆ ಜಿಯೋ ಟಿವಿ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಈ ಅಪ್ಲಿಕೇಶನ್ ನಲ್ಲಿ ಬರುವ ಎಲ್ಲ ಟಿವಿಗಳನ್ನು ವೀಕ್ಷಿಸಬಹುದಾಗಿದೆ. ಈ ಸೇವೆ ಆರಂಭಗೊಂಡ ದಿನದಿಂದ ಒಂದು ವರ್ಷದವರೆಗೆ ಎಲ್ಲ ಸೇವೆಗಳು ಉಚಿತವಾಗಿ ಸಿಗಲಿದ್ದು, ಒಂದು ವರ್ಷದ ಬಳಿಕ ಗ್ರಾಹಕರು ಬೇಕಾದ ಪ್ಯಾಕ್ಗೆ ಅನುಗುಣವಾಗಿ ಮಾಸಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಸ್ಪೀಡ್ ಎಷ್ಟು?

ಭಾರತೀಯ ದೂರ ಸಂಪರ್ಕ ಪ್ರಾಧಿಕಾರ(ಟ್ರಾಯ್) ಮಾರ್ಚ್ ತಿಂಗಳಿನಲ್ಲಿ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಜಿಯೋದ ಡೌನ್ಲೋಡ್ ಸ್ಪೀಡ್ 22.2 ಮೆಗಾ ಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ಇದೆ. ಸದ್ಯ ಜಿಯೋ ದೇಶದಲ್ಲಿ ಮೊಬೈಲ್ ಡೇಟಾ ಸ್ಪೀಡ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈಗ ಬರುತ್ತಿರುವ ಜಿಯೋ ಫೈಬರ್ನಲ್ಲಿ 100 ಎಂಬಿಪಿಎಸ್ ವೇಗದಲ್ಲಿ ಇಂಟರ್ನೆಟ್ ಸೇವೆ ಸಿಗಲಿದೆ.
ರೂಟರ್ ಖರೀದಿಸಬೇಕು:

ಒಂದು ವರ್ಷ ಉಚಿತ ಸೇವೆ ಆದರೂ ಗ್ರಾಹಕರು ಆರಂಭದಲ್ಲಿ 4,500 ರೂ. ನೀಡಿ ರೂಟರ್ ಖರೀಸಬೇಕು. ಎಲ್ಲ ಇಂಟರ್ನೆಟ್ ಸೇವೆಗಳು ಆಪ್ಟಿಕಲ್ ನೆಟ್ವರ್ಕ್ ಟರ್ಮಿನಲ್ (ಒಎನ್ಟಿ) ಬಾಕ್ಸ್ ರೂಟರ್ ಮೂಲಕ ನಡೆಯಲಿದ್ದು, ಒಂದೇ ಬಾರಿಗೆ ಒಟ್ಟು 40-45 ಡಿವೈಸ್ ಗಳನ್ನು ಕನೆಕ್ಟ್ ಮಾಡಬಹುದು. ಮೊಬೈಲ್, ಸ್ಮಾರ್ಟ್ ಟಿವಿ, ಲ್ಯಾಪ್ ಟಾಪ್, ಟ್ಯಾಬ್ಲೆಟ್, ಗೇಮಿಂಗ್, ಸಿಸಿಟಿವಿ, ಸ್ಮಾರ್ಟ್ ಹೋಮ್ ಸಿಸ್ಟಂ ಸಹ ಕನೆಕ್ಟ್ ಮಾಡಬಹುದು.ಈ ಸೇವೆಯ ಇನ್ನೊಂದು ವಿಶೇಷ ಏನೆಂದರೆ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಸೇರಿದಂತೆ ಇತರ ಡೇಟಾಗಳನ್ನು ಕ್ಲೌಡ್ ಮೂಲಕ ಸೇವ್ ಆಗಲಿದೆ. ಈ ಮೂಲಕ ಎಲ್ಲೇ ಹೋದರೂ ಡೇಟಾಗಳನ್ನು ಗ್ರಾಹಕರು ಚೆಕ್ ಮಾಡಬಹುದು.

ಎಲ್ಲೆಲ್ಲಿ ಸಿಗುತ್ತೆ?
ಸದ್ಯ ದೆಹಲಿ ಮತ್ತು ಮುಂಬೈ ನಗರದಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ದೇಶದ 1,600 ನಗರಗಳಲ್ಲಿ ಜಿಯೋ ಫೈಬರ್ ನೀಡಲು ಕಂಪನಿ ಪ್ಲಾನ್ ಮಾಡಿದೆ. ಕಳೆದ ಆಗಸ್ಟ್ ತಿಂಗಳಿನಿಂದ ಜಿಯೋ ಫೈಬರ್ ಗ್ರಾಹಕರ ನೊಂದಣಿ ಆರಂಭಿಸಿದೆ.ಇಲ್ಲಿಯವರೆಗೆ ಕಂಪನಿ ಈ ಪ್ಲಾನ್ ಬಗ್ಗೆ ಅಧಿಕೃತವಾದ ಹೇಳಿಕೆಯನ್ನು ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಕಂಪನಿ ಅಧಿಕಾರಿಯೊಬ್ಬರು, ಇಲ್ಲಿಯವರೆಗೂ ಯಾವ ಪ್ಲಾನ್ ಬಗ್ಗೆ ಮಾಹಿತಿ ನಮಗೆ ಇಲ್ಲ. ಜಿಯೋ ಗಿಗಾ ಫೈಬರ್ ಬ್ರಾಂಡ್ ಮಾರುಕಟ್ಟೆಗೆ ಬರಲು ಅಂದಾಜು ಎರಡು ತಿಂಗಳು ಸಮಯ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಭಾರತದಲ್ಲಿ 1.8 ಕೋಟಿ ಜನ ಬ್ರಾಂಡ್ ಬ್ಯಾಂಡ್ ಬಳಕೆ ಮಾಡುತ್ತಿದ್ದರೆ 53 ಕೋಟಿ ಜನ ಮೊಬೈಲ್ ಡೇಟಾ ಬಳಕೆ ಮಾಡುತ್ತಿದ್ದಾರೆ. ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆ ಅಧಿಕೃತವಾಗಿ ಆರಂಭವಾದರೆ ಟೆಲಿಕಾಂ ಕಂಪನಿಗಳಿಗೆ ಹೇಗೆ ಹೊಡೆತ ನೀಡಿತ್ತೋ ಅದೇ ರೀತಿಯಾಗಿ ಬ್ರಾಡ್ಬ್ಯಾಂಡ್ ಕಂಪನಿಗಳಿಗೆ ಹೊಡೆತ ನೀಡಬಹುದು ಎನ್ನುವ ವಿಶ್ಲೇಷಣೆ ಈಗಾಗಲೇ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.