ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….