ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?

ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .

ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .

ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…