ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು?
ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ ಕಂಪನಿಗಳು. ಮೊದಲೇ ಹೇಳಿದಂತೆ 2007 ರ ವರೆಗೆ ಜಗತ್ತನ್ನ ಆಳುತ್ತಿದ್ದದ್ದು ಬ್ಯಾಂಕಿಂಗ್ ವ್ಯವಸ್ಥೆ . ಇದೀಗ ಇದು ಟೆಕ್ನಾಲಜಿ ಕಂಪನಿಗಳ ಕೈ ಸೇರಿದೆ . ಜಗತ್ತು ಹೆಚ್ಚೆಚ್ಚು ನಗದನ್ನ ತೊರೆದು ಡಿಜಿಟಲ್ ಹಣವನ್ನ ಅಪ್ಪುವುದಕ್ಕೆ ಶುರು ಮಾಡಿದೆ. ಹಾಗಾಗಿ ಟೆಕ್ನಾಲಜಿ ಕಂಪನಿಗಳು ಹಣಕಾಸು ವಹಿವಾಟಿನ ಮೇಲೆ ತಮ್ಮ ಪ್ರಭಾವವನ್ನ ಹೆಚ್ಚು ಮಾಡಿಕೊಂಡಿವೆ. ಇಂದು ಜಗತ್ತನ್ನ ಆಳುತ್ತಿರುವ ಪ್ರಮುಖ ಟೆಕ್ನಾಲಜಿ ಕಂಪೆನಿಗಳಲ್ಲಿ ಐದು ಅತ್ಯಂತ ಪ್ರಮುಖವಾದವು. ಅವೆಂದರೆ 1.ಗೂಗಲ್ 2.ಆಪಲ್ 3.ಮೈಕ್ರೋಸಾಫ್ಟ್ 4. ಅಮೆಜಾನ್ 5.ಫೇಸ್ಬುಕ್.ಇಷ್ಟಕ್ಕೂ ನಮಗೇಕೆ ಬ್ಯಾಂಕ್ಗಳ ಮೇಲೆ ಅಷ್ಟೊಂದು ವ್ಯಾಮೋಹ ? ಬ್ಯಾಂಕ್ ಏನು ಬದಲಿಸಲಾಗದ ಶಾಶ್ವತ ವ್ಯವಸ್ಥೆಯೇನು ಅಲ್ಲ . ಬ್ಯಾಂಕ್ ಅಂದರೇನು ? ಬೇರೊಬ್ಬರ ಹಣವನ್ನ ಪಡೆದು ಇನ್ನೊಬ್ಬರಿಗೆ ಸಾಲ ಕೊಡುವ ದಲ್ಲಾಳಿ ಸಂಸ್ಥೆಯಷ್ಟೇ . ತಾನು ಹಣ ಪಡೆದವರಿಗೆ ಒಂದಷ್ಟು ಕೊಟ್ಟು ತಾನು ಕೊಟ್ಟವರಿಂದ ಒಂದಷ್ಟು ವಸೂಲಿ ಮಾಡಿ ಮಧ್ಯದಲ್ಲಿ ಒಂದಷ್ಟು ಹಣವನ್ನ ಲಾಭವನ್ನಾಗಿ ಮಾಡಿಕೊಳ್ಳುವ ಒಂದು ದಲ್ಲಾಳಿ ಮನಸ್ಥಿತಿಯ ಸಂಸ್ಥೆ ಇಷ್ಟು ಬಿಟ್ಟು ಬೇರೇನೂ ಅಲ್ಲ . ಇದೆ ಕಾರಣಕ್ಕೆ ಬ್ಯಾಂಕ್ಗಳು ನೇಪಥ್ಯಕ್ಕೆ ಸೇರುತ್ತದೆ ಅಂದದ್ದು . ಗಮನಿಸಿ ನೋಡಿ ಈ ಕೆಲಸವನ್ನ ಬ್ಯಾಂಕಿನ ಸಹಾಯವಿಲ್ಲದೆ ಟೆಕ್ನಾಲಜಿ ಕಂಪನಿಗಳು ಮಾಡಬಲ್ಲವು .
ಆದರೆ ಇಂದಿನ ಕಾಲಘಟ್ಟದಲ್ಲಿ ಬ್ಯಾಂಕ್ ಇದೆ ಕಾರ್ಯವನ್ನ ಟೆಕ್ನಾಲಜಿ ಸಂಸ್ಥೆಗಳ ಸಹಾಯವಿಲ್ಲದೆ ಮಾಡಲಾರವು . ಅಂದರೆ ಸರಳವಾಗಿ ಬ್ಯಾಂಕಿಗೆ ಟೆಕ್ನಾಲಜಿ ಕಂಪನಿ ಬೇಕು ಟೆಕ್ನಾಲಜಿ ಕಂಪನಿಗೆ ಬ್ಯಾಂಕಿನ ಅವಶ್ಯಕತೆ ಇಲ್ಲ . ಇಂತಹ ಸಂದರ್ಭದಲ್ಲಿ ಬ್ಯಾಂಕ್ಗಳು ಹೇಗೆ ತಾನೇ ಉಳಿದಾವು ? ಬ್ಯಾಂಕ್ ಎನ್ನುವುದು ಇಂದಲ್ಲ ನಾಳೆ ತೆರೆಮರೆಗೆ ಸರಿಯಲಿರುವ ಹಳೆಯ ಪಾತ್ರಧಾರಿ ಅಷ್ಟೇ . ಹಾಗಾದರೆ ಟೆಕ್ನಾಲಜಿ ಕಂಪನಿಗಳು ಮುಳುಗುವುದಿಲ್ಲವೇ ? ಎನ್ನುವ ಪ್ರಶ್ನೆ ಕೂಡ ಸಹಜವಾಗಿ ಓದುಗರಲ್ಲಿ ಹುಟ್ಟುತ್ತದೆ . ಇದಕ್ಕೆ ಉತ್ತರ ಬಹಳ ಸರಳ . ಗಮನಿಸಿ ನೋಡಿ 2007 ಕ್ಕೂ ಮುಂಚೆ ಬ್ಯಾಂಕಿನ ಬಗ್ಗೆ ಮೇಲಿನ ಸಾಲಿನಲ್ಲಿ ಹೇಳಿದ ಹಾಗೆ ಹೇಳಿದ್ದರೆ ಜನ ಹಾಗೆ ಹೇಳಿದವನ ಮಾತನ್ನ ಸಂಶಯದಿಂದ ನೋಡುತ್ತಿದ್ದರು . ಏಕೆಂದರೆ ಅಂದಿನ ಕಾಲಘಟ್ಟದಲ್ಲಿ ಅದೇ ವ್ಯವಸ್ಥೆಯಾಗಿತ್ತು . ಅರ್ಥ ಇಷ್ಟೇ ಟೆಕ್ನಾಲಜಿ ಕಂಪನಿಗಳು ಸದ್ಯದ ನಮ್ಮ ಜಗತ್ತಿನ ಹೊಸ ವ್ಯವಸ್ಥೆ . ಅವು ತಮ್ಮ ಆಟದ ಅತ್ಯುನ್ನತ ಸ್ಥಿತಿಯನ್ನ ತಲುಪುವ ಹಂತದಲ್ಲಿದೆ . ಪರಿಸ್ಥಿತಿ ಹೀಗಿರುವಾಗ ಅವುಗಳ ಕುಸಿತದ ಬಗ್ಗೆ ಈಗಲೇ ಮಾತಾಡುವುದಕ್ಕೆ ಇದು ಸರಿಯಾದ ಸಮಯವಲ್ಲ .
ಅಲ್ಲದೆ ಟೆಕ್ನಾಲಜಿ ಕಂಪನಿಗಳು ತಮ್ಮ ಲಾಭದ ಬಹು ದೊಡ್ಡ ಮೊತ್ತವನ್ನ ರಿಸೆರ್ಚ್ ಅಂಡ್ ಡೆವಲಪ್ಮೆಂಟ್ ಗಾಗಿ ವಿನಿಯೋಗಿಸುತ್ತವೆ . ಮುಂದಿನ ಹತ್ತು ವರ್ಷದಲ್ಲಿ ಜಗತ್ತಿನಲ್ಲಿ ಆಗಬಹದುದಾದ ಬದಲಾವಣೆಗಳ ಊಹೆ ಮಾಡಿಕೊಂಡು ಅದಕ್ಕೆ ಬೇಕಾದ ಸಿದ್ಧತೆಗಳನ್ನ ನೆಡೆಸುತ್ತದೆ . ನಮ್ಮ ಬ್ಯಾಂಕಿಂಗ್ ವ್ಯವಸ್ಥೆ ಮುದೊಂದು ದಿನ ಹೀಗಾಗಬಹದು ಎನ್ನುವ ಪರಿಕಲ್ಪನೆ ಕೂಡ ಇಟ್ಟುಕೊಂಡಿರಲಿಲ್ಲ . ಹೀಗಾಗಿ ಅವು ಸೋತು ಟೆಕ್ನಾಲಜಿ ಕಂಪನಿಗಳಿಗೆ ಅಧಿಕಾರದ ಚುಕ್ಕಾಣಿ ಬಿಟ್ಟು ಕೊಡಲಿವೆ .
ಕೊನೆ ಮಾತು : ಮೈಕ್ರೋಸಾಫ್ಟ್ ಸಂಸ್ಥೆಯ ಸ್ಥಾಪಕ ಬಿಲ್ ಗೇಟ್ಸ್ ಹೇಳುತ್ತಾರೆ ‘ ನಾವು ಮುಂದಿನ ಎರಡು ವರ್ಷದಲ್ಲಿ ಸಾಧಿಸಬಹುದಾದ ವಿಷಯಗಳನ್ನ ಅತಿಯಾಗಿ ವರ್ಣಿಸಿ ಹೇಳುತ್ತೇವೆ . ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಸಾಧಿಸಬಹದುದಾದ ವಿಷಯಗಳ ಬಗ್ಗೆ ನಮಗೆ ನಿಖರತೆಯಿಲ್ಲ ಹೀಗಾಗಿ ಅವುಗಳನ್ನ ನಾವು ಕಡೆಗಾಣಿಸುತ್ತೇವೆ ‘ . ಟೆಕ್ನಾಲಜಿ ಕಂಪನಿಗಳು ನಮ್ಮನ್ನಾಳುವ ಸಂಸ್ಥೆಗಳು ಇದರಲ್ಲಿ ಸಂಶಯ ಬೇಡ . .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…