ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು.

ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್ ಖಾತೆಗೆ ಸಮಸ್ಯೆ ಬರೆದು ಟ್ಯಾಗ್ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್ ಎಲೆಕ್ಟ್ರಿಕಲ್ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.

ವಿದ್ಯುತ್ ಇಲ್ಲದೇ ಚಿಮಣಿ ಬೆಳಕಿನಲ್ಲಿ ಕಾಲ ಕಳೆಯುತ್ತಿದ್ದ ದೊಡ್ಡಿಗಳಿಗೆ ಈಗ ಬೆಳಕಿನ ಸೌಭಾಗ್ಯ ಬಂದಂತಾಗಿದೆ. ಜೆಸ್ಕಾಂ ವಿಭಾಗೀಯ ಕಚೇರಿ ಸಹಾಯಕ ಎಂಜಿನಿಯರ್ ಹಳ್ಳಿಗಳಿಗೆ ತೆರಳಿ ಸಮೀಕ್ಷೆ ನಡೆಸಿ ಅಂದಾಜು ಪಟ್ಟಿ ಸಿದ್ಧಪಡಿಸಿದ್ದರು. ಈಗಾಗಲೇ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳನ್ನು ಹಾಕಿದ್ದು, ಬಹುತೇಕ ಮನೆಗಳಿಗೆ ಮೀಟರ್ ಅಳವಡಿಸಲಾಗಿದೆ.ಜತೆಗೆ, ಟ್ರಾನ್ಸ್ಫಾರ್ಮರ್ ತರಲಾಗಿದ್ದು, ಒಂದೆರಡು ದಿನಗಳಲ್ಲಿ ಅಳವಡಿಸುವ ಸಾಧ್ಯತೆಯಿದೆ. ಇದು ಕೇವಲ ಮೂರು ದೊಡ್ಡಿಗಳಿಗೆ ಮಾತ್ರವಲ್ಲದೇ ಇನ್ನುಳಿದ ಹತ್ತಾರು ದೊಡ್ಡಿಗಳ ಭಾಗ್ಯದ ಬಾಗಿಲು ತೆರೆಸಿದೆ. ಜೆಸ್ಕಾಂ ಅಧಿಕಾರಿಗಳ ಮಾಹಿತಿ ಪ್ರಕಾರ 1,400 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ.

ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.
ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರು ದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸರಬರಾಜು ಆರಂಭಿಸಲಾಗುವುದು. ಅಲ್ಲಿನ ನಿವಾಸಿಗಳು ಇನ್ನು ಮುಂದೆ ಸರಿಯಾಗಿ ವಿದ್ಯುತ್ ಬಿಲ್ ಪಾವತಿಸಿದರೆ ಸಾಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.