ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ ಎಂಬ ಚರ್ಚೆ ನಡೆಯಿತು. ಆದರೆ ಆ ಬಗ್ಗೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಅದರ ಬದಲಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದ 15 ಸಾಂದರ್ಭಿಕ ರಜೆಯನ್ನು ಕಡಿತಗೊಳಿಸಿ 10ಕ್ಕೆ ಇಳಿಸಲಾಗಿದೆ ಎಂದರು.

ಎರಡನೇ ಶನಿವಾರ ರಜೆ ಎಲ್ಲಾ ಇಲಾಖೆಗಳಿಗೂ ಅನ್ವಯಿಸುವುದಾಗಿ ಸ್ಪಷ್ಟಪಡಿಸಿದ ಅವರು, ಮತ್ತೊಮ್ಮೆ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಸಂಬಂಧ ಸಭೆ ನಡೆಸಲಿದ್ದಾರೆ. ತಕ್ಷಣದಿಂದ ರಜೆ ಘೋಷಣೆಯಾಗುತ್ತಿಲ್ಲ. ಮುಂದಿನ ವರ್ಷದಿಂದ ಇದು ಜಾರಿಗೆ ಬರುವುದಾಗಿ ಅವರು ತಿಳಿಸಿದರು.ಕನಕ, ಬಸವ ಹಾಗೂ ವಾಲ್ಮೀಕಿ ಜಯಂತಿ ಸೇರಿದಂತೆ ಕೆಲ ಜಯಂತಿಗಳ ರಜೆ ಕಡಿತಗೊಳಿಸುವ ಬಗ್ಗೆ ಕಾಂಗ್ರೆಸ್-ಜೆಡಿಎಸ್ ಸಚಿವರು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ರಜೆಗಳನ್ನು ರದ್ದು ಮಾಡದೇ, ಯಥಾವತ್ ಆಗಿ ಮುಂದುವರೆಸಲಾಗುವುದು. ಆದರೆ, ನಾಲ್ಕನೇ ಶನಿವಾರದಂದು ಸರ್ಕಾರಿ ರಜೆ ನೀಡಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

6ನೇ ವೇತನ ಆಯೋಗದ ಶಿಫಾರಸಿನಂತೆ ಜಯಂತಿಗಳನ್ನು ರದ್ದುಗೊಳಿಸುವ ಬಗ್ಗೆ ಪರಿಶೀಲನೆಗೆ ರಚಿಸಲಾಗಿದ್ದ ಕೃಷ್ಣಭೈರೇಗೌಡ ನೇತೃತ್ವದ ಸಂಪುಟ ಉಪಸಮಿತಿ ಜಯಂತಿಗಳ ರಜೆ ಕಡಿತಗೊಳಿಸಿ 4ನೇ ಶನಿವಾರ ರಜೆ ನೀಡುವಂತೆ ಶಿಫಾರಸು ಮಾಡಿತ್ತು. ಆದರೆ ಈ ವರದಿ ಅನ್ವಯ ಜಯಂತಿಗಳಿಗೆ ರಜೆ ಕಡಿತಗೊಳಿಸಿದರೆ, ಲಿಂಗಾಯತ, ಕುರುಬ, ವಾಲ್ಮೀಕಿ ಸೇರಿದಂತೆ ಅನೇಕ ಸಮುದಾಯಗಳು ಅಸಮಾಧಾನಕ್ಕೆ ಒಳಗಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಪುಟ ಸಭೆಯಲ್ಲಿ ಪರ ವಿರೋಧ ಚರ್ಚೆಯಾಗಿದ್ದು, ಅಂತಿಮವಾಗಿ ಈ ರಜೆ ಕಡಿತ ನಿರ್ಧಾರದಿಂದ ಸದ್ಯದ ಮಟ್ಟಿಗೆ ಹಿಂದೆ ಸರಿಯಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…