ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ.

ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ 2 ವರ್ಷಗಳವರೆಗೆ ದಾಸ್ತಾನು ಮಾಡಬಹುದು. ಆಹಾರವಸ್ತುವಾಗಿ ಬಳಸಬಹುದಾಗಿದೆ ಎಂಬ ಅಂಶ ಅವರ ಗಮನಸೆಳೆದಿದೆ. 20ಎಕರೆ ಪ್ರದೇಶದಲ್ಲಿ ನುಗ್ಗೆ ಸಸಿಗಳನ್ನು ನಾಟಿ ಮಾಡಿದ್ದಾರೆ. ತಮ್ಮ ಹೊಲಕ್ಕೆ ಹೊಂದಿಕೊಂಡಿರುವ ಇತರ ರೈತರ 15 ಎಕರೆಯನ್ನು ಲೀಸ್ಗೆ ಪಡೆದು ಅಲ್ಲೂ ನುಗ್ಗೆ ಸಸಿಗಳನ್ನು ಬೆಳೆಸಿದ್ದಾರೆ.

ಪೌಡರ್ ತಯಾರಿಸುವ ವಿಧಾನ:
ನುಗ್ಗೆ ಸಸಿಗಳಲ್ಲಿ ಕಾಯಿಯಾಗುವವರೆಗೆ ಈ ರೈತ ಕಾಯುವುದಿಲ್ಲ. ಗಿಡಗಳಲ್ಲಿನ ಸೊಪ್ಪನ್ನು ಆಗಾಗ್ಗೆ ಕೊಯ್ಲು ಮಾಡುತ್ತಾರೆ. ಎಲೆಗಳ ಬಣ್ಣ ಕೆಡದಂತೆ ಪಾಲಿ ಡ್ರೈಯಿಂಗ್ ವಿಧಾನದ ಮೂಲಕ ಕನಿಷ್ಠ 26 ಡಿಗ್ರಿ, ಗರಿಷ್ಠ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಲಾಗುತ್ತದೆ. ನಂತರ ಪೌಡರ್ಮಾಡಿ ಪ್ಯಾಕ್ ಮಾಡಲಾಗುತ್ತದೆ.
ಹಸಿ ಎಲೆಗಳನ್ನು ನೇರವಾಗಿ ಅಡುಗೆಗೆ ಅಥವಾ ಸೇವನೆಗೆ ಬಳಸಲು ಜನರು ಹಿಂದೇಟು ಹಾಕುತ್ತಾರೆ. ನಿಗದಿತ ಉಷ್ಣಾಂಶದಲ್ಲಿ ಎಲೆಗಳನ್ನು ಒಣಗಿಸಿ ಪೌಡರ್ ತಯಾರಿಸಿ ಮಾರಾಟ ಮಾಡಿದರೆ ಬೇಡಿಕೆಯ ಜತೆಗೆ ಬೆಲೆಯೂ ಹೆಚ್ಚು ಎಂಬುದು ರೈತ ಬಸಯ್ಯ ಹಿರೇಮಠ ಅವರ ಅನುಭವದ ಮಾತಾಗಿದೆ. ಹೀಗೆ ಸ್ಥಳೀಯವಾಗಿ ತಯಾರಿಸಿದ ನುಗ್ಗೆ ಪೌಡರ್ಗೆ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಂದ ಆರ್ಡರ್ ಬಂದಿರುವುದೇ ಅವರ ಉತ್ಸಾಹ ಇಮ್ಮಡಿಗೊಳಿಸಿದೆ.

ನುಗ್ಗೆ ಎಲೆಯಲ್ಲಿ ಸಾಕಷ್ಟು ಪೋಷಕಾಂಶಗಳು ಇರುವುದು ಪ್ರಯೋಗಗಳಿಂದ ರುಜುವಾತಾಗಿದೆ. ಇದರಲ್ಲಿ ಪೊಟ್ಯಾಷಿಯಂ, ಅಮಿನೋ ಆ್ಯಸಿಡ್, ಕ್ಯಾಲ್ಸಿಯಂ, ಕಬ್ಬಿಣಾಂಶ, ಕ್ಲೊರೊಫೆರಿಲ್ ನಾರಿನಾಂಶ ಇದೆ. ಮಧುಮೇಹ ರೋಗಿಗಳಿಗೆ ಇದು ಸೂಕ್ತ ಆಹಾರ. ಬಿ.ಪಿ. ನಿಯಂತ್ರಿಸುವ, ಕ್ಯಾನ್ಸರ್ಕಾರಕ ಅಂಶಗಳನ್ನು ನಾಶಮಾಡುವ ಗುಣವನ್ನು ನುಗ್ಗೆ ಸೊಪ್ಪು ಹೊಂದಿದೆ. ಸೊಪ್ಪನ್ನು ಸಾಂಬರ್ಗೆ ಹಾಕಬಹುದಾಗಿದೆ.
ನುಗ್ಗೆ ಸೊಪ್ಪಿನಿಂದ ಪೌಡರ್ ತಯಾರಿಸುವ ಘಟಕ ಆರಂಭಿಸುವುದಾಗಿ ಬಸಯ್ಯ ಹಿರೇಮಠ ಹೇಳಿದಾಗ ಆ ಬಗ್ಗೆ ಅಧ್ಯಯನ ನಡೆಸಲಾಯಿತು. ವೈಜ್ಞಾನಿಕವಾಗಿ ಇದು ಎಷ್ಟು ಸರಿ ಎಂಬುದನ್ನು ನಾನಾ ಆಕರಗಳ ಮೂಲಕ ತಿಳಿದು, ನುಗ್ಗೆ ಬೆಳೆ ಮತ್ತು ಪ್ರೊಸೆಸಿಂಗ್ ಯುನಿಟ್ಗೆ ಇಲಾಖೆಯಿಂದ ನೆರವು ನೀಡಲು ಪ್ರಸ್ತಾವನೆ ಕಳುಹಿಸಲಾಗಿತ್ತು. ಇದೀಗ ಅದು ಸಾಕಾರಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.