ಸುದ್ದಿ

ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

46

ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.

ಎಂಎನ್‍ಆರ್‍ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…