ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…