ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/