ಸುದ್ದಿ

1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

31

ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಅದು ಟ್ವಿಟ್ಟರ್, ಫೇಸ್‌ಬುಕ್‌ಗಳಲ್ಲಿ ಬರೆದಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಅರಣ್ಯ ಸೇವೆ ಮತ್ತು ಅರಣ್ಯ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಹಾಗೂ ಚಿಕ್ಕಮಕ್ಕಳಲ್ಲಿ ವನ್ಯಜೀವಿ, ಅರಣ್ಯದ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಜತೆಗೆ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಜನರಿಗೆ ಕಾಡುಪ್ರಾಣಿ-ಮಾನವ ಸಂಘರ್ಷದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಕಾರಂತ್ ಹೇಳಿಕೊಂಡಿದ್ದರು.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಟಿ. ಬಾಲಚಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವನ್ಯಜೀವಿಗಳ ದಾಳಿಗೆ ಬಲಿಯಾದವರು/ಬೆಳೆ ಹಾನಿಗೆ ತುತ್ತಾದವರಿಗೆ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ಸಂಸ್ಥೆ, ವ್ಯಕ್ತಿ ಅಥವಾ ಎನ್‌ಜಿಓ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಕೃತಿ ಕಾರಂತ್ ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನೂ ನಡೆಸಿಲ್ಲ. ಪರಿಹಾರ ಒದಗಿಸುವ ಒಂದೇ ಒಂದು ಪ್ರಕರಣದಲ್ಲಿಯೂ ಅವರು ಅಧಿಕಾರಿಗಳನ್ನು ಸಂಪರ್ಕಿಸಿಲ್ಲ. ಹೀಗಾಗಿ ಪರಿಹಾರ ಕೊಡಿಸಿರುವ ಹೇಳಿಕೆಯೇ ಸುಳ್ಳಾಗಿದೆ ಎಂದು ಆರೋಪಿಸಿದೆ.

13,702 ಅರ್ಜಿಗಳ ವಿಲೇವಾರಿ ಮಾನವ-ಪ್ರಾಣಿ ಸಂಘರ್ಷದಿಂದ ಜೀವ ಹಾನಿ ಮತ್ತು ಬೆಳೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಒದಗಿಸಲು 6,505 ಜನರ ಪರವಾಗಿ 13,702 ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಅವರಿಗೆ ಪರಿಹಾರ ಕೊಡಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ದಾಖಲೆಗಳನ್ನು ರೋಲೆಕ್ಸ್ ಸಂಸ್ಥೆಗೂ ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಸ್ವತಃ ಇಲ್ಲಿನ ಜನರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಪಡೆದು ಪರಿಹಾರವನ್ನು ಒದಗಿಸಿದೆ ಎಂದು ಹೇಳಿದೆ.

ಕೃತಿ ಕಾರಂತ್ ಅವರನ್ನು ನೋಡಿಯೇ ಇಲ್ಲ ಕಾಡು ಪ್ರಾಣಿಗಳು ದಾಳಿ ಮಾಡಿದರೆ ನಮ್ಮ ಸಿಬ್ಬಂದಿಯೇ ಅಲ್ಲಿಗೆ ಹೋಗುತ್ತಾರೆ. ಅವರ ಹೆಸರು-ಹಾನಿಯ ವಿವರಗಳನ್ನು ಬರೆದುಕೊಂಡು ಬರುತ್ತಾರೆ. ಜನರಿಗೆ ಪರಿಹಾರ ನೀಡಲು ನಮಗೆ ಮಧ್ಯವರ್ತಿಗಳ ಅವಶ್ಯಜತೆ ಇಲ್ಲ. ನಾವು ಕೃತಿ ಕಾರಂತ್ ಯಾರೆಂದು ಅವರನ್ನು ನೋಡಿಯೇ ಇಲ್ಲ. ಬಂಡೀಪುರ, ನಾಗರಹೊಳೆಯಲ್ಲಿ ಯಾವ ಎನ್‌ಜಿಓ ಕೂಡ ಕೆಲಸ ಮಾಡಿಲ್ಲ ಎಂದು ಎಪಿಸಿಎಫ್ ಜಗತ್ ರಾಮ್ ಅವರು ಹೇಳಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…