ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ ಆತನನ್ನು ಸಾರ್ವಜನಿಕರು ಪೊಲೀಸರ ಕೈಗೆ ನೀಡಿದ್ದಾರೆ. ಈ ವೇಳೆ ಥಳಿತಕ್ಕೊಳಗಾದ ಶಾಮ್ಸ್ ಅರೆ ಪ್ರಜ್ಞಾವಸ್ಥೆಯಲ್ಲಿದ್ದನು ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಯುವಕನಿಗೆ ಥಳಿಸುತ್ತಿರುವ ದೃಶ್ಯವನ್ನು ಇತರರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಥಳಿತಕ್ಕೊಳಗಾದ ಶಾಮ್ಸ್ ಗೆ ಚಿಕಿತ್ಸೆ ನೀಡಲು ಕರೆದೊಯ್ಯುತ್ತೇವೆ ಎಂದು ಬೇಡಿಕೊಂಡರೂ ಪೊಲೀಸರು ನಿರಾಕರಿಸಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ.ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ. ಅಲ್ಲಿಯೂ ಆತನ ಸ್ಥಿತಿ ಚಿಂತಾನಕವಾಗುತ್ತಿದ್ದಂತೆಯೇ ಯುವಕನನ್ನು ಜಿಲ್ಲೆಯ ಸದಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಯುವಕ ಮೃತಪಟ್ಟಿರುವ ವಿಚಾರವನ್ನು ಕುಟುಂಬಸ್ಥರು ಅಲ್ಲಗೆಳೆದಿದ್ದಾರೆ. ಹೀಗಾಗಿ ಆತನನ್ನು ಜೆಮ್ ಶೆಡ್ ಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ತಿಳಿಸಿದ್ದಾರೆ. ಅಂತೆಯೇ ಅಲ್ಲಿಗೆ ಕರೆದೊಯ್ದಾಗಲೂ ವೈದ್ಯರು, ಯುವಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಶಾಮ್ಸ್ ಅನಾರೋಗ್ಯದಿಂದ ಬಳಲುತ್ತಿದ್ದನು. ಹೀಗಾಗಿ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಆತನ ಕುಟುಂಬಸ್ಥರು ನೀಡಿದ ದೂರಿನಂತೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಮ್ಸ್ ಜೆಮ್ಶೆಡ್ ಪುರದಿಂದ ಕರ್ಸೋವಾದಲ್ಲಿರುವ ತಮ್ಮ ಮನೆಗೆ ಮಂಗಳವಾರ ವಾಪಸ್ಸಾಗುತ್ತಿದ್ದನು. ಈ ವೇಳೆ ಶಾಮ್ಸ್ ಜೊತೆ ಆತನ ಸ್ನೇಹಿತರು ಕೂಡ ಇದ್ದರು. ಇನ್ನೇನು ತನ್ನ ಮನೆಗೆ 5 ಕಿ.ಮೀ ಇರುವಾಗಲೇ ಸಾರ್ವಜನಿಕರು ಇವರನ್ನು ಹಿಡಿದು ಥಳಿಸಿದ್ದಾರೆ.

ಥಳಿಸಲು ಕಾರಣವೇನು?
ಸೈಕಲ್ ಕಳವಾಗಿದ್ದ ಸಂದರ್ಭದಲ್ಲೇ ಈ ಯುವಕರು ಅದೇ ಸ್ಥಳದಲ್ಲಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಇವರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು, ಯುವಕರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಯುವಕರ ಮೇಲೆ ಹಲ್ಲೆ ನಡೆಯುತ್ತಿದ್ದಂತೆಯೇ ಶಾಮ್ಸ್ ಜೊತೆ ಇದ್ದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಈತ ಮಾತ್ರ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡಿದ್ದನು ಎಂದು ಶಾಮ್ಸ್ ಸಂಬಂಧಿಕರು ಘಟನೆ ಬಗ್ಗೆ ವಿವರಿಸಿದ್ದಾರೆ.ಇಡೀ ರಾತ್ರಿ ಸಾರ್ವಜನಿಕರು ನನಗೆ ಚೆನ್ನಾಗಿ ಥಳಿಸಿ ಹಲ್ಲೆ ಮಾಡಿದ್ದಾರೆ. ಬಳಿಕ ಬೆಳಗ್ಗೆ ಪೊಲೀಸರಿಗೆ ನನ್ನನ್ನು ಹಸ್ತಾಂತರಿಸಿದ್ದಾರೆ ಎಂದು ಶಾಮ್ಸ್ ಸಾಯುವ ಮೊದಲು ಸಾರ್ವಜನಿಕರ ಮೇಲೆ ಆರೋಪ ಮಾಡಿದ್ದಾನೆ.

ನನ್ನನ್ನು ನೋಡಲೆಂದು ಸಹೋದರ ಪೊಲೀಸ್ ಠಾಣೆ ಬಂದಿದ್ದನು. ಈ ವೇಳೆ ಪೊಲೀಸ್ ಅಧಿಕಾರಿಗಳು ಆತನನ್ನು ಬೆದರಿಸಿ, ಲಾಠಿಯಿಂದ ಹೊಡೆದು ಹೊರದಬ್ಬಿದ್ದಾರೆ. ನೀನು ಒಬ್ಬ ಕಳ್ಳನನ್ನು ನೋಡಲು ಠಾಣೆಗೆ ಬಂದಿದ್ದೀಯಾ ಎಂದು ಬೈದಿದ್ದಾರೆ. ಅಲ್ಲದೆ ನಿನ್ನನ್ನು ಕೂಡ ಜೈಲಿಗೆ ಹಾಕುತ್ತೇವೆ. ನಾವು ಆರೋಪಿಯನ್ನು ಮಾತನಾಡಿಸಲು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಲ್ಲ ಎಂದು ಸಹೋದರನ ಮೇಲೆ ಕಿಡಿಕಾರಿದ್ದಾರೆ ಎಂದು ಶಾಮ್ಸ್ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಆಸ್ಪತ್ರೆಯಲ್ಲಿರುವಾಗ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…