ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ ಆತನನ್ನು ಸಾರ್ವಜನಿಕರು ಪೊಲೀಸರ ಕೈಗೆ ನೀಡಿದ್ದಾರೆ. ಈ ವೇಳೆ ಥಳಿತಕ್ಕೊಳಗಾದ ಶಾಮ್ಸ್ ಅರೆ ಪ್ರಜ್ಞಾವಸ್ಥೆಯಲ್ಲಿದ್ದನು ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಯುವಕನಿಗೆ ಥಳಿಸುತ್ತಿರುವ ದೃಶ್ಯವನ್ನು ಇತರರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಥಳಿತಕ್ಕೊಳಗಾದ ಶಾಮ್ಸ್ ಗೆ ಚಿಕಿತ್ಸೆ ನೀಡಲು ಕರೆದೊಯ್ಯುತ್ತೇವೆ ಎಂದು ಬೇಡಿಕೊಂಡರೂ ಪೊಲೀಸರು ನಿರಾಕರಿಸಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ.ಯುವಕನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಪೊಲೀಸರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ. ಅಲ್ಲಿಯೂ ಆತನ ಸ್ಥಿತಿ ಚಿಂತಾನಕವಾಗುತ್ತಿದ್ದಂತೆಯೇ ಯುವಕನನ್ನು ಜಿಲ್ಲೆಯ ಸದಾರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಯುವಕ ಮೃತಪಟ್ಟಿರುವ ವಿಚಾರವನ್ನು ಕುಟುಂಬಸ್ಥರು ಅಲ್ಲಗೆಳೆದಿದ್ದಾರೆ. ಹೀಗಾಗಿ ಆತನನ್ನು ಜೆಮ್ ಶೆಡ್ ಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ತಿಳಿಸಿದ್ದಾರೆ. ಅಂತೆಯೇ ಅಲ್ಲಿಗೆ ಕರೆದೊಯ್ದಾಗಲೂ ವೈದ್ಯರು, ಯುವಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಶಾಮ್ಸ್ ಅನಾರೋಗ್ಯದಿಂದ ಬಳಲುತ್ತಿದ್ದನು. ಹೀಗಾಗಿ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಆತನ ಕುಟುಂಬಸ್ಥರು ನೀಡಿದ ದೂರಿನಂತೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಮ್ಸ್ ಜೆಮ್ಶೆಡ್ ಪುರದಿಂದ ಕರ್ಸೋವಾದಲ್ಲಿರುವ ತಮ್ಮ ಮನೆಗೆ ಮಂಗಳವಾರ ವಾಪಸ್ಸಾಗುತ್ತಿದ್ದನು. ಈ ವೇಳೆ ಶಾಮ್ಸ್ ಜೊತೆ ಆತನ ಸ್ನೇಹಿತರು ಕೂಡ ಇದ್ದರು. ಇನ್ನೇನು ತನ್ನ ಮನೆಗೆ 5 ಕಿ.ಮೀ ಇರುವಾಗಲೇ ಸಾರ್ವಜನಿಕರು ಇವರನ್ನು ಹಿಡಿದು ಥಳಿಸಿದ್ದಾರೆ.

ಥಳಿಸಲು ಕಾರಣವೇನು?
ಸೈಕಲ್ ಕಳವಾಗಿದ್ದ ಸಂದರ್ಭದಲ್ಲೇ ಈ ಯುವಕರು ಅದೇ ಸ್ಥಳದಲ್ಲಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಇವರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ ಸಾರ್ವಜನಿಕರು, ಯುವಕರನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಯುವಕರ ಮೇಲೆ ಹಲ್ಲೆ ನಡೆಯುತ್ತಿದ್ದಂತೆಯೇ ಶಾಮ್ಸ್ ಜೊತೆ ಇದ್ದ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಈತ ಮಾತ್ರ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡಿದ್ದನು ಎಂದು ಶಾಮ್ಸ್ ಸಂಬಂಧಿಕರು ಘಟನೆ ಬಗ್ಗೆ ವಿವರಿಸಿದ್ದಾರೆ.ಇಡೀ ರಾತ್ರಿ ಸಾರ್ವಜನಿಕರು ನನಗೆ ಚೆನ್ನಾಗಿ ಥಳಿಸಿ ಹಲ್ಲೆ ಮಾಡಿದ್ದಾರೆ. ಬಳಿಕ ಬೆಳಗ್ಗೆ ಪೊಲೀಸರಿಗೆ ನನ್ನನ್ನು ಹಸ್ತಾಂತರಿಸಿದ್ದಾರೆ ಎಂದು ಶಾಮ್ಸ್ ಸಾಯುವ ಮೊದಲು ಸಾರ್ವಜನಿಕರ ಮೇಲೆ ಆರೋಪ ಮಾಡಿದ್ದಾನೆ.

ನನ್ನನ್ನು ನೋಡಲೆಂದು ಸಹೋದರ ಪೊಲೀಸ್ ಠಾಣೆ ಬಂದಿದ್ದನು. ಈ ವೇಳೆ ಪೊಲೀಸ್ ಅಧಿಕಾರಿಗಳು ಆತನನ್ನು ಬೆದರಿಸಿ, ಲಾಠಿಯಿಂದ ಹೊಡೆದು ಹೊರದಬ್ಬಿದ್ದಾರೆ. ನೀನು ಒಬ್ಬ ಕಳ್ಳನನ್ನು ನೋಡಲು ಠಾಣೆಗೆ ಬಂದಿದ್ದೀಯಾ ಎಂದು ಬೈದಿದ್ದಾರೆ. ಅಲ್ಲದೆ ನಿನ್ನನ್ನು ಕೂಡ ಜೈಲಿಗೆ ಹಾಕುತ್ತೇವೆ. ನಾವು ಆರೋಪಿಯನ್ನು ಮಾತನಾಡಿಸಲು ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಲ್ಲ ಎಂದು ಸಹೋದರನ ಮೇಲೆ ಕಿಡಿಕಾರಿದ್ದಾರೆ ಎಂದು ಶಾಮ್ಸ್ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಆಸ್ಪತ್ರೆಯಲ್ಲಿರುವಾಗ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…