ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.

ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..

ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.

ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.

ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.

ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.

ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.

ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.