ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1454

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…