ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

83

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…