News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

215

ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.

ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)

ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.

ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.

ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಸುದ್ದಿ

    ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

    ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…