ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

53

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…