ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ.

ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ ಭಕ್ತಾದಿಗಳಿಗೆ ದರ್ಶನ ಪಡೆಯುವ ಅವಕಾಶ ಸಿಕ್ಕಿದೆ.ಈ ವರ್ಷ ಮತ್ತೆ ಆ ವಿಶೇಷ ಅವಧಿ ಬಂದಿದೆ. ಜುಲೈ 1ರ ಸೋಮವಾರದಿಂದ 48 ದಿನಗಳ ಕಾಲ ಅಂದರೆ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ದರ್ಶನದ ಅವಕಾಶ ಸಿಗಲಿದೆ. ಪ್ರತಿ ದಿನ ಬೆಳಗ್ಗೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಬಹುದು.

ಮೊದಲ 40 ದಿನಗಳ ಕಾಲ ಅಂದರೆ ಜುಲೈ 1ರಿಂದ ಆಗಸ್ಟ್ 9ರವರೆಗೆ ಮಲಗಿಸಿದ ರೀತಿಯಲ್ಲಿ ದೇವರ ವಿಗ್ರಹವನ್ನು ಇರಿಸಲಾಗುತ್ತದೆ. ಬಳಿಕ ಕೊನೆಯ ಎಂಟು ದಿನಗಳು ಆಗಸ್ಟ್ 10ರಿಂದ 17ರವರೆಗೆ ನಿಂತಿರುವ ಭಂಗಿಯಲ್ಲಿ ವಿಗ್ರಹವನ್ನು ನಿಲ್ಲಿಸಲಾಗುತ್ತದೆ.

ಹಿನ್ನೆಲೆ ಏನು?
16ನೇ ಶತಮಾನದಲ್ಲಿ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನದಲ್ಲಿ ಅಥಿ ವರದಾರ್ ಮೂರ್ತಿಗೆ ಮೂಜೆ ಮಾಡಲಾಗುತಿತ್ತು. ಆಗ ದೇವಸ್ಥಾನದ ಮೇಲೆ ದಾಳಿ ನಡೆದಾಗ ದೇವಿಯ ವಿಗ್ರಹವನ್ನು ದೇಗುಲದ ಕಲ್ಯಾಣಿಯಲ್ಲಿ ಬಚ್ಚಿಡಲಾಗಿತ್ತು. ಆದರೆ ದಾಳಿಯ ಬಳಿಕ ಬಂದ ದೇವಸ್ಥಾನದ ಸಿಬ್ಬಂದಿಗೆ ಅಥಿ ವರದಾರ್ ದೇವರ ಮೂಲ ವಿಗ್ರಹ ಎಲ್ಲಿದೆ ಎನ್ನುವ ವಿಚಾರ ತಿಳಿದಿರಲಿಲ್ಲ. ಆ ನಂತರ ಅಥಿ ವರದಾರ್ ದೇವರ ಇನ್ನೊಂದು ವಿಗ್ರಹ ಮಾಡಿಸಿ ಪೂಜೆ ಅದಕ್ಕೆ ಪೂಜೆ ಸಲ್ಲಿಸುತ್ತಿದ್ದರು.

ಆದರೆ 40 ವರ್ಷದ ಬಳಿಕ 17ಂ9ರಲ್ಲಿ ದೇವಸ್ಥಾನದ ಕಲ್ಯಾಣಿ ಕಾರಣಾಂತರಗಳಿಂದ ಖಾಲಿಯಾಗಿತ್ತು. ಆ ವೇಳೆ ಕಲ್ಯಾಣಿಯಲ್ಲಿ ಬಚ್ಚಿಟ್ಟಿದ್ದ ಅಥಿ ವರದಾರ್ ದೇವರ ಮೂಲ ವಿಗ್ರಹ ಪತ್ತೆಯಾಗಿತ್ತು. ಆ ಬಳಿಕ 40 ವರ್ಷಕ್ಕೊಮ್ಮೆ 48 ದಿನಗಳ ಕಾಲ ದೇವಿಯನ್ನು ನೀರಿನಿಂದ ಹೊರತೆಗೆದು ಪೂಜಿಸುವ ಸಂಪ್ರದಾಯ ಹುಟ್ಟಿಕೊಂಡಿತು.

ಸದ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂರು ತಾತ್ಕಾಲಿಕ ಬಸ್ ನಿಲ್ದಾಣವನ್ನು ಪಟ್ಟಣದ ಹೊರಗಡೆ ನಿರ್ಮಿಸಲಾಗಿದೆ. ಹಾಗೆಯೇ ಕಾರುಗಳು ಹಾಗೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಅಷ್ಟೇ ಅಲ್ಲದೆ ಭಕ್ತಾದಿಗಳನ್ನು ಶ್ರೀ ವರದರಾಜ ಪೆರುಮಾಳ್ ದೇವಸ್ಥಾನಕ್ಕೆ ಕರೆತರಲು ದೋಣಿಯ ವ್ಯವಸ್ಥೆ ಕೂಡ ಇದೆ ಎಂದು ದೇವಾಲಯದ ಸಿಬ್ಬಂದಿ ಮಾಹಿತಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…