ಸುದ್ದಿ

ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

98

ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ ವೃತ್ತಿಯಲ್ಲಿ ಮಾಡಿಸಿದ ರೋಮಾಂಚಕ ಫೋಟೋಶೂಟ್‍ಗಳಲ್ಲಿ ಇದು ಒಂದಾಗಿದೆ. ನಾನು ಕೆಲವೇ ಸಮಯದಲ್ಲಿ ಈ ಫೋಟೋಶೂಟ್ ಮಾಡಿಸಿದ್ದೇನೆ. ಇದು ಒಳ್ಳೆಯ ಅನುಭವ” ಎಂದು ಹೇಳಿದ್ದಾರೆ.

ಸಮೀರಾ ಫೋಟೋ ನೋಡಿ ಕೆಲವರು, ನೀವು ಈ ಫೋಟೋದಲ್ಲಿ ಸೂಪರ್ ಕೂಲ್ ಆಗಿ ಕಾಣಿಸುತ್ತಿದ್ದೀರಾ ಎಂದು ನಿಮಗೆ ಅನಿಸಿರಬಹುದು. ಆದರೆ ಪ್ರೆಗ್ನೆನ್ಸಿ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವ ಅವಶ್ಯಕತೆ ಆದರೂ ಏನಿತ್ತು. ದಯವಿಟ್ಟು ಹುಷಾರಾಗಿರಿ. ಮಕ್ಕಳು ದೇವರು ಕೊಟ್ಟ ಉಡುಗೊರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವು ಅಭಿಮಾನಿಗಳು, ಗರ್ಭಿಣಿಯಾಗಿರುವ ಸಮಯದಲ್ಲಿ ಈ ರೀತಿ ಫೋಟೋಶೂಟ್ ಮಾಡಿಸುವುದು ಸರಿಯಲ್ಲ ಎಂದು ಕಾಮೆಂಟ್ ಮಾಡಿದ್ದರೆ, ಮತ್ತೆ ಕೆಲವರು ನಿಮಗೆ ತಲೆ ಕೆಟ್ಟಿದ್ದೀಯಾ ಎಂದು ಕಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಸಮೀರಾ ಅವರ ಈ ಫೋಟೋಗಳಿಗೆ ಯಾವುದೇ ಫಿಲ್ಟರ್ ಅಥವಾ ಫೋಟೋಶಾಪ್ ಮಾಡಲಿಲ್ಲ. ಈ ಫೋಟೋಗಳು ಸುಂದರವಾಗಿ ಬಂದಿದ್ದು, ಇದರಿಂದ ಸಮೀರಾ ಖುಷಿಯಾಗಿದ್ದಾರೆ. ಆದರೆ ಅವರ ಅಭಿಮಾನಿಗಳು ಈ ಫೋಟೋ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮೀರಾ ರೆಡ್ಡಿ 2014ರಲ್ಲಿ ಉದ್ಯಮಿ ಅಕ್ಷಯ್ ವಾರ್ದೆ ಅವರನ್ನು ಮದುವೆಯಾಗಿದ್ದರು. ಸಮೀರಾ ರೆಡ್ಡಿಗೆ ಈಗಾಗಲೇ ಒಂದು ಗಂಡು ಮಗು ಇದ್ದು, ಈಗ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಮೀರಾ ರೆಡ್ಡಿ ಬಹುಭಾಷಾ ನಟಿಯಾಗಿದ್ದು, ತೆಲುಗಿನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಅವರ ಜೊತೆ ನಟಿಸಿದ್ದಾರೆ. ಅಲ್ಲದೇ ಕನ್ನಡದಲ್ಲೂ ಕಿಚ್ಚ ಸುದೀಪ್ ಅವರ ಜೊತೆ `ವರದನಾಯಕ’ ಚಿತ್ರದಲ್ಲಿ ನಟಿಸಿದ್ದಾರೆ. ಸಮೀರಾ 2014ರಲ್ಲಿ ಮದುವೆ ಆದ ಬಳಿಕ ಚಿತ್ರರಂಗದಿಂದ ದೂರ ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…