ಸುದ್ದಿ

ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

156

ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ.

ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ ದಂಪತಿ, ಖಾಸಗಿ ಸೈಬರ್‌ ತಜ್ಞರ ಸಹಾಯದಿಂದ ಅಶ್ಲೀಲ ವೆಬ್‌ ತಾಣದಿಂದ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲವಾಗಿದೆ.ಸೂರತ್‌ನಲ್ಲಿರುವ, ಹೆಚ್ಚಾಗಿ ಸಿರಿವಂತರು ವಾಸಿಸುವ ಬಡಾವಣೆಯ ನಿವಾಸಿಯಾಗಿರುವ ರಾಜೇಶ್‌ (ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸ್ಮಾರ್ಟ್‌ ಟೀವಿ ಮೂಲಕ ಅಶ್ಲೀಲ ವೆಬ್‌ಸೈಟ್‌ಗಳನ್ನು ಸಂದರ್ಶಿಸಿ, ವಿಡಿಯೋ ನೋಡುವ ಅಭ್ಯಾಸವಿದೆ. ಒಂದು ದಿನ ಇದೇ ರೀತಿಯ ವಿಡಿಯೋ ನೋಡುತ್ತಿರುವಾಗ,

ರಾಜೇಶ್‌ ಅವರು ತಮ್ಮ ಪತ್ನಿ ಜತೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ವೆಬ್‌ಸೈಟ್‌ನಲ್ಲಿ ಗೋಚರವಾಗಿದೆ. ಇದನ್ನು ನೋಡಿ ದಂಗಾದ ಅವರು ಪೊಲೀಸರಿಗೆ ದೂರು ನೀಡಲು ಮುಜುಗರವಾಗಿದೆ. ಹೀಗಾಗಿ ಖಾಸಗಿ ಸೈಬರ್‌ ತಜ್ಞರ ಮೊರೆ ಹೋಗಿದ್ದಾರೆ.ಆ ತಜ್ಞರು ರಾಜೇಶ್‌ ಮಲಗುವ ಕೋಣೆಯಲ್ಲೆಲ್ಲಾ ಜಾಲಾಡಿದ್ದಾರೆ. ಯಾವುದೇ ಕ್ಯಾಮೆರಾ ಸಿಕ್ಕಿಲ್ಲ. ವಿಡಿಯೋ ಯಾವ ರೀತಿ ಸೆರೆಯಾಯಿತು ಹಾಗೂ ಅಪ್‌ಲೋಡ್‌ ಆಯಿತು ಎಂಬ ವಿಚಾರಕ್ಕಾಗಿ ಸಾಕಷ್ಟುತಲೆಕೆಡಿಸಿಕೊಂಡಿದ್ದಾರೆ. ಕೊನೆಗೆ ಕೋಣೆಯಲ್ಲಿದ್ದ ಟೀವಿ ಮೇಲೆ ಅನುಮಾನ ಬಂದಿದೆ.

ರಾಜೇಶ್‌ ಅವರು ಅಶ್ಲೀಲ ವೆಬ್‌ಸೈಟ್‌ಗಳಿಗೆ ಭೇಟಿ ನೀಡುತ್ತಿದ್ದರು. ಆ ಸಂದರ್ಭದಲ್ಲಿ ಹ್ಯಾಕರ್‌ ಟೀವಿಯನ್ನು ಕಂಪ್ಯೂಟರ್‌ ರೀತಿ ಹ್ಯಾಕ್‌ ಮಾಡಿದ್ದಾನೆ. ಅದರಲ್ಲಿದ್ದ ಕೆಮೆರಾವನ್ನು ನಿಯಂತ್ರಿಸಿ, ತನಗೆ ಬೇಕಾದಾಗ ವಿಡಿಯೋ ಸೆರೆ ಹಿಡಿದಿದ್ದಾನೆ. ಆ ಟೀವಿ ವೈಫೈ ಜತೆ ಸಂಪರ್ಕ ಹೊಂದಿದ್ದ ಕಾರಣ ದೃಶ್ಯಗಳು ನೇರವಾಗಿ ಆತನಿಗೆ ಸಿಕ್ಕಿವೆ. ಬಳಿಕ ಆತ ವಿಡಿಯೋವನ್ನು ಆನ್‌ಲೈನ್‌ಗೆ ಅಪ್‌ಲೋಡ್‌ ಮಾಡಿದ್ದಾನೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ರಾಜೇಶ್‌ ಅವರು ಸೈಬರ್‌ ತಜ್ಞರ ಸಹಾಯದಿಂದ ಆ ವಿಡಿಯೋವನ್ನು ಅಳಿಸಿ ಹಾಕುವಲ್ಲಿ ಸಫಲರಾಗಿದ್ದಾರೆ.

ಟೀವಿ ತಯಾರಿಕಾ ಕಂಪನಿಗಳು ಹಲವು ಭದ್ರತಾ ಅಂಶಗಳನ್ನು ಅಳವಡಿಸಿರುವುದಾಗಿ ಹೇಳಿದರೂ, ಆನ್‌ಲೈನ್‌ ಭದ್ರತೆಯ ಖಾತ್ರಿ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಆಟೋಮೊಬೈಲ್ಸ್

    ಕೇವಲ 15 ನಿಮಿಷಗಳಲ್ಲಿ ಹೋಂಡಾ ಕಂಪನಿಯ ಎಲೆಕ್ಟ್ರಿಕ್ ಕಾರು ಚಾರ್ಜ್ ಆಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…