ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ.

ಯಾರ ರಾಜೀನಾಮೆ ಸ್ವೀಕೃತ..?
ಯಾವ ರಾಜೀನಾಮೆ ತಿರಸ್ಕೃತ..?


ನಾಮಪತ್ರ ಸ್ವೀಕೃತಗೊಂಡಿರುವ ಆನಂದ್ ಸಿಂಗ್, ನಾರಾಯಣಗೌಡ, ಪ್ರತಾಪ್ ಗೌಡ ಅವರಿಗೆ ಶುಕ್ರವಾರ ತಮ್ಮ ಮುಂದೆ ಹಾಜರಾಗಲು ಸ್ವೀಕರ್ ನೋಟಿಸ್ ಕಳುಹಿಸಿದ್ದಾರೆ. ಹಾಗೆಯೇ, ರಾಮಲಿಂಗಾರೆಡ್ಡಿ ಮತ್ತು ಗೋಪಾಲಯ್ಯ ಅವರಿಗೆ ಇದೇ 15ರಂದು ಹಾಜರಾಗಲು ನೋಟಿಸ್ ನೀಡಿದ್ದಾರೆ. ರಾಜೀನಾಮೆ ಕ್ರಮಬದ್ಧವಾಗಿ ಸಲ್ಲಿಸದ ಶಾಸಕರಿಗೆ ತಿಳಿವಳಿಕೆ ನೋಟಿಸ್ ನೀಡಿದ್ದು, ಮತ್ತೆ ಇಚ್ಚಿಸಿದ್ದಲಿ ಇದೇ 12ರಂದು ಖುದ್ದು ಹಾಜರಾಗುವ ಮೂಲಕ ಕ್ರಮಬದ್ಧವಾಗಿ ರಾಜೀನಾಮೆ ಪತ್ರ ಸಲ್ಲಿಸಬಹುದು ಎಂದು ಅದರಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ಮಧ್ಯೆ, ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಶಾಸಕರು ನನ್ನನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ನೀವು ತ್ವರಿತವಾಗಿ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಇದಕ್ಕೆ ಸ್ಪೀಕರ್ ರಮೇಶ್ ಕುಮಾರ್, ಯಾವ ಶಾಸಕರೂ ನನ್ನನ್ನು ಭೇಟಿಯಾಗಿಲ್ಲ. ಭೇಟಿಯಾದ ಬಳಿಕ ಸಂವಿಧಾನಬದ್ಧವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…