ಸುದ್ದಿ

ಗಣಪತಿಗೆ ಮಾನವ ಮುಖ ಇರುವ ಜಗತ್ತಿನ ಏಕೈಕ ದೇವಾಲಯ! ಇಲ್ಲಿ ಗಜಮುಖನಿಗಲ್ಲ ನರ ಮುಖದ ಗಣಪತಿಗೆ ನಡೆಸಲಾಗುತ್ತದೆ ಪೂಜೆ…!!

90

ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು.

ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ. ದಂತಕಥೆಗಳ ಪ್ರಕಾರ ಪ್ರಭು ಶ್ರೀರಾಮ ಪಿತೃ ದೋಷ ನಿವಾರಣೆಗಾಗಿ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ನಲಾಗುತ್ತದೆ. ತನ್ನ ತಂದೆ ದಶರಥನ ಪಿಂಡ ಪ್ರದಾನವನ್ನು ಆತ ಸ್ವತಃ ಶಿವನ ಅಣತಿಯಂತೆ ಇಲ್ಲಿಯೆ ಮಾಡಿಸಿದ್ದನೆನ್ನಲಾಗುತ್ತದೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.

ಹೆಸರೇ ಸೂಚಿಸುವಂತೆ ತಿಲ+ತರ್ಪಣ ಅಂದರೆ ಪಿತೃಗಳಿಗೆ ಪಿಂಡ ಪ್ರದಾನ ಮಾಡಿ ತರ್ಪಣ ನೀಡುವ ಸ್ಥಳ ಎಂದರ್ಥ. ಇವತ್ತಿಗೂ ಇಲ್ಲಿ ಪಿಂಡ ಪ್ರದಾನ ನಡೆಸುವ ಸಂಪ್ರದಾಯ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಈ ಸ್ಥಳದ ಮೂಲ ಹೆಸರು ಮಂತ್ರವಾದಂ ಎಂಬುದಾಗಿದೆ. ರಾಮ ತನ್ನ ತಂದೆಯ ಪಿಂಡ ಪ್ರದಾನ ಕಾರ್ಯಗಳನ್ನು ನೆರವೇರಿಸುವಾಗ ನಾಲ್ಕು ಪಿಂಡಗಳು ಪದೆ ಪದೆ ಹುಳದ ರೂಪ ತಾಳುತ್ತವೆ.

ವ್ಯಥೆಯಿಂದ ರಾಮನು ಶಿವನನ್ನು ಧ್ಯಾನಿಸಲು ಶಿವನು ರಾಮನಿಗೆ ಮಂತ್ರವಾದಂ ಎಂಬ ಸ್ಥಳದಲ್ಲಿ ಪಿಂಡ ಪ್ರದಾನ ಕಾರ್ಯ ನಡೆಸಲು ಹೇಳುತ್ತಾನೆ. ಶಿವನ ಆಜ್ಞೆಯಂತೆಯೆ ರಾಮನು ಇಲ್ಲಿ ಪಿಂಡ ಪ್ರದಾನ ಮಾಡುವಾಗ ನಾಲ್ಕು ಪಿಂಡಗಳೂ ಶಿವಲಿಂಗದ ಆಕಾರ ತಾಳುತ್ತವೆ. ಈ ನಾಲ್ಕೂ ಲಿಂಗಗಳು ಆದಿ ವಿನಾಯಕ ದೇವಸ್ಥಾನದಿಂದ ಸ್ವಲ್ಪವೇ ದೂರದಲ್ಲಿರುವ ಮುಕ್ತೀಶ್ವರರ್ ದೇವಾಲಯದಲ್ಲಿ ಇವೆ.
ತಮಿಳುನಾಡಿನ ಚಿದಂಬರಂನಲ್ಲಿಯೂ ಗಣೇಶನ ಮಾನವ ಮುಖದ ವಿಗ್ರಹವೊಂದಿದೆ ಎನ್ನಲಾಗಿದೆ. ಆದರೆ ಇದರ ಬಗ್ಗೆ ಹೆಚ್ಚು ಐತಿಹ್ಯಗಳು ತಿಳಿದುಬಂದಿಲ್ಲ. ಭಾರತದಲ್ಲಿ ಹಲವಾರು ಸ್ಥಳಗಳು ಇನ್ನೂ ಅಜ್ಞಾತವಾಗಿಯೆ ಉಳಿದಿವೆ. ಈ ಸ್ಥಳಗಳ ಐತಿಹ್ಯಗಳನ್ನು ತಿಳಿದುಕೊಂಡರೆ ಎಷ್ಟೋ ಸತ್ಯಗಳು ಹೊರ ಜಗತ್ತಿಗೆ ತಿಳಿದು ಬರಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…