ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…