ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…