News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

64

ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ.

ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ ವಿಮಾ ಸೌಲಭ್ಯವಿದೆ ಹಾಗೂ ಅವನ್ನು ಪಡೆದುಕೊಳ್ಳುವುದು ಹೇಗೆ ಎಂಬ ಬಗ್ಗೆ ವಿವರವಾಗಿ ತಿಳಿಯೋಣ.

ವಿಮೆಗಳ ಬಗ್ಗೆ ಮೇಲ್ನೋಟಕ್ಕೆ ತಿಳಿಯುವ ಬದಲು ಆಳವಾಗಿ ಕೂಡ ಅಭ್ಯಸಿಸಬೇಕಾಗುತ್ತದೆ. ನಿಮಗೆ ಗೊತ್ತಿರದ ಕೆಲ ಪ್ರಮುಖ ಉಚಿತ ಅಂತರ್ಗತ ವಿಮಾ ಸುರಕ್ಷತೆ-ಇನ್ಸೂರೆನ್ಸ್‌ ಕವರ್ ಬಗ್ಗೆ ತಿಳಿಯೋಣ ಬನ್ನಿ..

  1. ಬ್ಯಾಂಕ್ ಡಿಪಾಸಿಟ್‌ಗಳು ; ಭಾರತದಲ್ಲಿ ಕಾರ್ಯನಿರ್ವಹಿಸುವ ಪ್ರಾದೇಶಿಕ, ಸಹಕಾರಿ ಹಾಗೂ ವಿದೇಶಿ ಬ್ಯಾಂಕುಗಳು ಸೇರಿದಂತೆ ಇತರ ಎಲ್ಲ ಬ್ಯಾಂಕುಗಳಲ್ಲಿನ ಫಿಕ್ಸೆಡ್ ಡಿಪಾಸಿಟ್ (ನಿಶ್ಚಿತ ಠೇವಣಿ) ಗಳಿಗೆ ಸರಕಾರದ ಡಿಪಾಸಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಯಿಂದ ವಿಮಾ ಸುರಕ್ಷತೆ ನೀಡಲಾಗಿರುತ್ತದೆ. ಒಂದೊಮ್ಮೆ ಯಾವುದೇ ಬ್ಯಾಂಕು ವಿಲೀನ ಅಥವಾ ಲೈಸೆನ್ಸ್ ರದ್ದತಿಯ ಕಾರಣದಿಂದ ಗ್ರಾಹಕರ ಫಿಕ್ಸೆಡ್ ಡಿಪಾಸಿಟ್ ಮೊತ್ತವನ್ನು ಮರುಪಾವತಿ ಮಾಡಲು ವಿಫಲವಾದಲ್ಲಿ ಹೂಡಿಕೆ ಮೊತ್ತ ಹಾಗೂ ಬಡ್ಡಿಯ ಮೇಲೆ 1 ಲಕ್ಷ ರೂ.ಗಳವರೆಗೆ ವಿಮಾ ಸುರಕ್ಷತೆ ಇರುತ್ತದೆ. ಆದರೆ ಒಂದು ವೇಳೆ ಎಫ್‌ಡಿ ಇಟ್ಟ ಗ್ರಾಹಕನು ಬ್ಯಾಂಕಿಗೆ ಯಾವುದಾದರೂ ಮೊತ್ತ ಪಾವತಿಸಬೇಕಿದ್ದಲ್ಲಿ ಡಿಐಸಿಜಿಸಿ ಮೊದಲಿಗೆ ಅದನ್ನು ಕಡಿತಗೊಳಿಸುತ್ತದೆ. ಇಂಥ ವಿಮೆಯ ಪಾಲಿಸಿ ಹಣವನ್ನು ಬ್ಯಾಂಕುಗಳೇ ಭರಿಸುತ್ತವೆ. ಉಳಿತಾಯ, ಚಾಲ್ತಿ ಖಾತೆ, ಫಿಕ್ಸೆಡ್ ಡಿಪಾಸಿಟ್ ಹಾಗೂ ರೆಕರಿಂಗ್ ಡಿಪಾಸಿಟ್ ಖಾತೆಗಳಿಗೆ ಡಿಐಸಿಜಿಸಿ ವಿಮಾ ಸುರಕ್ಷತೆ ಇರುತ್ತದೆ.
  2. ಗೃಹೋಪಕರಣಗಳಿಗೆ ವಿಮೆ ; ಫ್ರಿಜ್, ಟಿವಿ ಮತ್ತು ವಾಶಿಂಗ್ ಮಶೀನ್ ಸೇರಿದಂತೆ ಇನ್ನಿತರ ಇನ್ನೂ ಹಲವಾರು ಗೃಹೋಪಯೋಗಿ ಉಪಕರಣಗಳು ಎಲೆಕ್ಟ್ರಿಕ್ ಅಥವಾ ಮೆಕ್ಯಾನಿಕಲ್ ತೊಂದರೆಯಿಂದ ಹಾಳಾದಲ್ಲಿ ಅದಕ್ಕೆ ವಿಮಾ ಸುರಕ್ಷತೆ ಯೋಜನೆಯನ್ನು ಆಯಾ ಗೃಹೋಪಯೋಗಿ ವಸ್ತು ತಯಾರಿಕಾ ಕಂಪನಿಗಳು ನೀಡುತ್ತವೆ. ಈ ವಿಮಾ ಸೌಲಭ್ಯವನ್ನು ವಾರಂಟಿಯೊಂದಿಗೆ ತಳಕು ಹಾಕಿ ಗೊಂದಲ ಮಾಡಿಕೊಳ್ಳಬೇಡಿ. ಇವೆರಡೂ ಭಿನ್ನ ಸಂಗತಿಗಳಾಗಿವೆ. ಸಾಮಾನ್ಯವಾಗಿ ಹಬ್ಬದ ಸೇಲ್ ಸಂದರ್ಭಗಳಲ್ಲಿ ಇಂಥ ವಿಮಾ ಸೌಕರ್ಯಗಳನ್ನು ಹೆಚ್ಚುವರಿಯಾಗಿ ಕಂಪನಿಗಳು ಆಫರ್ ಮಾಡುತ್ತವೆ. ಈ ವಿಮೆಗೆ ನೀವು ನೇರವಾಗಿ ಯಾವುದೇ ಮೊತ್ತವನ್ನು ಪಾವತಿ ಮಾಡುವುದಿಲ್ಲವಾದರೂ ಕಂಪನಿಗಳೇ ತಮ್ಮ ಉಪಕರಣಗಳ ಬೆಲೆಯನ್ನು ಒಂದಿಷ್ಟು ಹೆಚ್ಚಿಸಿ ಅದರಿಂದ ವಿಮಾ ಖರ್ಚಿನ ಮೊತ್ತವನ್ನು ಭರಿಸುತ್ತವೆ.
  3. ಮೊಬೈಲ್ ಫೋನುಗಳಿಗೆ ವಿಮೆ ; ಮೊಬೈಲ್ ತಯಾರಿಕಾ ಕಂಪನಿಗಳು ಮೊಬೈಲ್ ಫೋನುಗಳಿಗೆ ವಿಮಾ ಸೌಲಭ್ಯ ನೀಡುತ್ತಿವೆ. ಮೊಬೈಲ್ ಫೋನ್ ಕಳುವಾದಲ್ಲಿ ಅಥವಾ ಹಾನಿಗೀಡಾದಲ್ಲಿ ವಿಮಾ ಸುರಕ್ಷತೆ ಪಡೆಯಬಹುದು. ಉದಾಹರಣೆಗೆ ನೋಡುವುದಾದರೆ, ನೋಕಿಯಾ ಕಂಪನಿಯು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಸಹಯೋಗದಲ್ಲಿ ತನ್ನ ಕಂಪನಿಯ ಮೊಬೈಲ್ ಫೋನುಗಳಿಗೆ ವಿಮಾ ಸುರಕ್ಷತೆ ಒದಗಿಸುತ್ತಿದೆ. ಹಾಗೆಯೇ ಟೆಲಿನಾರ್ ಇಂಡಿಯಾ ಕಮ್ಯೂನಿಕೇಶನ್ ಕಂಪನಿ ತನ್ನ ಗ್ರಾಹಕರಿಗೆ ಸುಮಾರು 50 ಸಾವಿರ ರೂ.ಗಳವರೆಗೂ ವಿಮಾ ಸೌಲಭ್ಯ ನೀಡುತ್ತದೆ ಎಂಬುದು ಅನೇಕರಿಗೆ ಗೊತ್ತಿಲ್ಲ.
  4. ಎಲ್ಪಿಜಿ ವಿಮಾ ; ಸುರಕ್ಷೆ ಎಲ್ಲ ನೋಂದಾಯಿತ ಎಲ್ಪಿಜಿ ಗ್ರಾಹಕರು ಹಾಗೂ ಅವರ ಕುಟುಂಬಸ್ಥರಿಗೆ ಗ್ಯಾಸ್ ಸಿಲಿಂಡರ್‌ನಿಂದ ಉಂಟಾಗಬಹುದಾದ ಅಪಘಾತಗಳ ಸಂದರ್ಭದಲ್ಲಿ ವಿಮಾ ಸುರಕ್ಷತೆ ನೀಡಲಾಗುತ್ತದೆ. ಇಂಥ ಸಂದರ್ಭಗಳಲ್ಲಿ ಅಪಘಾತ ಪ್ರಕರಣದ ಬಗ್ಗೆ ಮೊದಲಿಗೆ ಹತ್ತಿರದ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಬೇಕು. ಈ ಬಗ್ಗೆ ಎಲ್ಪಿಜಿ ವಿತರಕರಿಗೆ ಸಹ ಲಿಖಿತವಾಗಿ ದೂರು ಸಲ್ಲಿಸಬೇಕಾಗುತ್ತದೆ. ಆದರೆ ಈ ರೀತಿಯ ವಿಮೆ ಪಡೆಯಬೇಕಾದರೆ ನೀವು ಮಾನ್ಯತೆ ಪಡೆದ ಐಎಸ್‌ಐ ಮಾರ್ಕಿನ ಗ್ಯಾಸ್ ಪೈಪ್ ಹಾಗೂ ಲೈಟರ್‌ಗಳನ್ನೇ ಉಪಯೋಗಿಸುತ್ತಿರಬೇಕು. ಹಾಗೆಯೇ ವಿತರಕರಲ್ಲಿ ನೋಂದಾಯಿತ ವಿಳಾಸದಲ್ಲಿಯೇ ಎಲ್ಪಿಜಿ ಸಂಪರ್ಕವನ್ನು ಬಳಸುತ್ತಿರಬೇಕು. ನೀವು ನೀಡಿದ ವಿಳಾಸ ಹಾಗೂ ಎಲ್ಪಿಜಿ ಕನೆಕ್ಷನ್ ಬಳಸುತ್ತಿರುವ ಸ್ಥಳ ಬೇರೆಯಾಗಿದ್ದಲ್ಲಿ ಈ ವಿಮೆ ಕ್ಲೇಮ್ ಮಾಡಲಾಗದು.
  5. ರೈಲು ಪ್ರಯಾಣ ; ರೈಲಿನಲ್ಲಿ ಪ್ರಯಾಣಿಸುವ ವೇಳೆ ನಿಮ್ಮ ಲಗೇಜ್‌ಗಳು ಕಳುವಾದಲ್ಲಿ ಅದಕ್ಕೆ ವಿಮಾ ಸೌಲಭ್ಯ ಸಿಗುತ್ತದೆ ಎಂಬುದು ಬಹಳಷ್ಟು ಜನರಿಗೆ ತಿಳಿದಿಲ್ಲ. ನೀವು ಇ-ಟಿಕೆಟ್ ಬುಕ್ ಮಾಡಿದಾಗಲೇ ಐಆರ್‌ಸಿಟಿಸಿ ಈ ವಿಮೆ ನೀಡಿರುತ್ತದೆ. ಪ್ರಯಾಣ ಮಾಡುವಾಗ ಬ್ಯಾಗ್ ಅಥವಾ ಲಗೇಜು ಕಳುವಾದಲ್ಲಿ ಈ ವಿಮಾ ಸೌಲಭ್ಯವನ್ನು ಕ್ಲೇಮ್ ಮಾಡಬಹುದು. ಮೊಬೈಲ್ ಫೋನ್, ಲ್ಯಾಪಟಾಪ್ ಹಾಗೂ ಇನ್ನಿತರ ಯಾವುದೇ ಬೆಲೆಬಾಳುವ ವಸ್ತುಗಳಿಗೂ ಈ ವಿಮೆ ಅನ್ವಯಿಸುತ್ತದೆ.
  6. ಜೀರೊ ಲಯಾಬಿಲಿಟಿ ; ಕಾರ್ಡ್ಸ್ (ಶೂನ್ಯ ಹೊಣೆಗಾರಿಗೆ ಕಾರ್ಡ್) ವೀಸಾ ಹಾಗೂ ಮಾಸ್ಟರಕಾರ್ಡ್ ಕಾರ್ಡುಗಳನ್ನು ಹೊಂದಿದ ಗ್ರಾಹಕರಿಗೆ ಹಲವಾರು ಬ್ಯಾಂಕುಗಳು ಜೀರೊ ಲಯಾಬಿಲಿಟಿ ಇನ್ಸೂರೆನ್ಸ್ ಕವರೇಜ್ ನೀಡುತ್ತವೆ. ತಮ್ಮ ಕಾರ್ಡುಗಳ ಮೇಲೆ ನಡೆಯುವ ಯಾವುದೇ ಅನಧಿಕೃತ ವ್ಯವಹಾರಗಳಿಗೆ ಬ್ಯಾಂಕುಗಳು ವಿಮಾ ಸುರಕ್ಷೆ ನೀಡುತ್ತವೆ. ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ತಕ್ಷಣ ಬ್ಯಾಂಕಿಗೆ ತಿಳಿಸಿದಲ್ಲಿ ಆ ಕಾರ್ಡ್‌ನಿಂದ ಮಾಡಲಾಗುವ ಯಾವುದೇ ಅನಧಿಕೃತ ವ್ಯಹಹಾರಗಳ ಹಾನಿಯನ್ನು ಬ್ಯಾಂಕುಗಳೇ ಭರಿಸುತ್ತವೆ. ಹಾಗೆಯೇ ಡೆಬಿಟ್ ಕಾರ್ಡ್ ಕಳೆದು ಹೋದ ಸಂದರ್ಭದಲ್ಲಿ ಗ್ರಾಹಕರಿಗೆ ಉಂಟಾಗುವ ಹಾನಿಯನ್ನು ಬ್ಯಾಂಕುಗಳು ಮರುಪಾವತಿಸುತ್ತವೆ.
  7. ಪ್ರಧಾನ ಮಂತ್ರಿ ಜನ ಧನ ಯೋಜನೆ ; ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕಿನಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಜೀರೋ ಬ್ಯಾಲೆನ್ಸ್ ಅಕೌಂಟ್ ಸೌಲಭ್ಯದೊಂದಿಗೆ ರುಪೇ ಡೆಬಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಹೊಂದಿದವರಿಗೆ ಕ್ರಮವಾಗಿ 1 ಲಕ್ಷ ರೂ.ವರೆಗೆ ವೈಯಕ್ತಿಕ ಅಪಘಾತ ವಿಮೆ ಹಾಗೂ 30 ಸಾವಿರ ರೂ.ಗಳವರೆಗೆ ಜೀವ ವಿಮಾ ಸುರಕ್ಷತೆ ಇರುತ್ತದೆ.
  8. ರುಪೇ ಕಾರ್ಡ್ ; ರುಪೇ ಎಂಬುದು ಮಾಸ್ಟರ್ ಕಾರ್ಡ್ ಹಾಗೂ ವೀಸಾ ಕಾರ್ಡುಗಳ ಬದಲಿಗೆ ಭಾರತೀಯ ಕಾರ್ಡ್ ಕಂಪನಿಯಾಗಿದೆ. ಇದನ್ನು ಎಟಿಎಂಗಳಲ್ಲಿ, ಅಂಗಡಿಗಳಲ್ಲಿ ಹಾಗೂ ಇ-ಕಾಮರ್ಸ್ ವೆಬ್ಸೈಟ್‌ಗಳಲ್ಲಿ ಬಳಸಬಹುದು. ಈ ಕಾರ್ಡ್ ಹೊಂದಿದವರಿಗೆ ವೈಯಕ್ತಿಕ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯ ಸಂದರ್ಭಗಳಲ್ಲಿ 2 ಲಕ್ಷ ರೂ.ಗಳವರೆಗೆ ಉಚಿತ ವಿಮಾ ಸುರಕ್ಷತೆ ಇರುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ.
  9. ಎಂಪ್ಲಾಯೀಸ್ ಡಿಪಾಸಿಟ್ ಲಿಂಕ್ಡ್ ಇನ್ಸೂರೆನ್ಸ್ (ಇಡಿಎಲ್‌ಐ) ಇಪಿಎಫ್ (ಕಾರ್ಮಿಕ ಭವಿಷ್ಯ ನಿಧಿ) ; ಸದಸ್ಯರಿಗೆ 6 ಲಕ್ಷ ರೂ. ಮೊತ್ತದ ವಿಮಾ ಸುರಕ್ಷತೆ ಇರುತ್ತದೆ. ಇಪಿಎಫ್ ಸದಸ್ಯನೋರ್ವ ಮರಣ ಹೊಂದಿದಲ್ಲಿ ಆತನ ಕುಟುಂಬಕ್ಕೆ ವಿಮಾ ಸುರಕ್ಷತೆ ನೀಡಲಾಗುತ್ತದೆ. ಎಲ್ಲ ಇಪಿಎಫ್ ಸದಸ್ಯರು ಇಡಿಎಲ್‌ಐ ವಿಮಾ ಸುರಕ್ಷತೆ ಪಡೆದಿರುತ್ತಾರೆ. ಇಪಿಎಫ್ ಹೊಂದಿದ ಕಾರ್ಮಿಕನ ಒಟ್ಟು ವಂತಿಗೆಯಲ್ಲಿ ಶೇ 0.5 ರಷ್ಟು ಮೊತ್ತವನ್ನು ಇಡಿಎಲ್‌ಐಗೆ ಪ್ರೀಮಿಯಂ ಮೊತ್ತವಾಗಿ ಪಾವತಿಸಲಾಗಿರುತ್ತದೆ.
  10. ಮ್ಯೂಚುವಲ್ ಫಂಡ್‌ಗಳಿಗೆ ವಿಮಾ ಸುರಕ್ಷೆ ಬಿರ್ಲಾ ಸನ್ ಲೈಫ್; ಐಸಿಐಸಿಐ ಪ್ರುಡೆನ್ಷಿಯಲ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಸೇರಿದಂತೆ ಇನ್ನೂ ಹಲವಾರು ಮ್ಯೂಚುವಲ್ ಫಂಡ್ ಕಂಪನಿಗಳು ತಮ್ಮ ಸಿಪ್ (SIP) ಹೂಡಿಕೆದಾರರಿಗೆ ಜೀವ ವಿಮಾ ಸೌಲಭ್ಯ ನೀಡುತ್ತಿವೆ. ಈ ಯೋಜನೆಯಡಿ ಫಂಡ್ ಹೂಡಿಕೆದಾರ ಅನಿರೀಕ್ಷಿತವಾಗಿ ಸಾವನ್ನಪ್ಪಿದಲ್ಲಿ ಫಂಡ್ ಕಂಪನಿ ತಾನಾಗಿಯೇ ಪ್ರೀಮಿಯಂ ಪಾವತಿ ಜಾರಿಯಲ್ಲಿಡುತ್ತದೆ. ಫಂಡ್ ಮ್ಯಾಚುರಿಟಿ ನಂತರ ನಾಮಿನಿಗೆ ಮೊತ್ತ ಪಾವತಿಸಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ಸುದ್ದಿ

    36 ಗಂಟೆಯಲ್ಲಿ ದುಬೈ ತೋರಿಸುವ ಹೊಸ ಸ್ಟಾಪ್‍ಓವರ್ ಪಾಸ್…!

    ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್‍ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್‍ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…