News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

55

ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್‍ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್‍ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

    ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.

  • inspirational, ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…