ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!!

ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ ರೀತಿಯ ಕೌತುಕ ಮೂಡಿಸುವ ದ್ವೀಪವೇ ಸರ್ಪ ದ್ವೀಪ!! ಬ್ರೆಜಿಲ್ನ ಸಾವೋ ಪೌಲೋದಿಂದ ಕೇವಲ 21 ಕಿಲೋಮೀಟರ್ ದೂರದಲ್ಲಿರುವ ಈ ಸರ್ಪ ದ್ವೀಪದ ಹೆಸರೇ ಇಲ್ಹಾ ಡ ಕ್ವಿಮಾಡ ಗ್ರಾಂಡೇ!! ಜನಸಂಪರ್ಕದಿಂದ ದೂರ ಉಳಿದಿರುವ ಈ ದ್ವೀಪ ಬರೀ ವಿಷಪೂರಿತ ಹಾವುಗಳಿಂದ ತುಂಬಿ ತುಳುಕಾಡುತ್ತಿದೆ.

ಈ ದ್ವೀಪದಲ್ಲಿ ಅತ್ಯಂತ ಭಯಂಕರ ಮತ್ತು ವಿಷಕಾರಕ ಸರ್ಪಗಳು ಇರುವುದರಿಂದ ಈ ದ್ವೀಪಕ್ಕೆ ಮನುಷ್ಯರ ಪ್ರವೇಶವನ್ನೇ ನಿರ್ಬಂಧಿಸಲಾಗಿದೆ!! ಹೌದು… ಈ ದ್ವೀಪದಲ್ಲಿರುವ ಹಾವುಗಳು ಕಚ್ಚಿದ ತಕ್ಷಣ ಸಾವು ನಿಶ್ಚಿತ. ಅದಕ್ಕಾಗಿಯೇ ಈ ದ್ವೀಪಕ್ಕೆ ಭೇಟಿ ಕೊಟ್ಟವರು ಮರಳಿ ಬರುತ್ತಾರೆಂಬ ನಂಬಿಕೆ ಇಲ್ಲ. ಹಾಗಾಗಿ ಬ್ರೆಜಿಲ್ ಸರಕಾರವು ಈ ದ್ವೀಪಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಿದೆ. ಆದರೆ ಇಲ್ಹಾ ಡ ಕ್ವಿಮಾಡ ಗ್ರಾಂಡೇ ದ್ವೀಪವು ಮೊದಲು ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಹೊಂದಿತ್ತು. ನಂತರ ಸಮುದ್ರ ಮಟ್ಟ ಏರುಮುಖವಾದ ಹಿನ್ನೆಲೆಯಲ್ಲಿ ಮುಖ್ಯ ಭೂಭಾಗದೊಂದಿಗೆ ಸಂಪರ್ಕ ಕಡಿದುಕೊಂಡು, ಪ್ರತ್ಯೇಕ ದ್ವೀಪವಾದ ಮೇಲೆ ಹೊಸಹೊಸ ಜಾತಿಯ ಸರ್ಪಗಳ ವಿಕಸನಕ್ಕೆ ಈ ದ್ವೀಪ ನಾಂದಿಯಾಯಿತು ಎನ್ನಲಾಗುತ್ತದೆ.

ಈ ದ್ವೀಪದಲ್ಲಿರುವ ಹಾವುಗಳಲ್ಲಿ ಹೆಚ್ಚಿನವು ವಿಷಪೂರಿತ. ಇಲ್ಲಿಯವರೆಗೆ 2000- 4000 ಜಾತಿಯ ಹಾವುಗಳನ್ನು ಈ ದ್ವೀಪದಲ್ಲಿ ಗುರುತಿಸಲಾಗಿದೆ. 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ ಸುಮಾರು 4,30,000ಕ್ಕೂ ಹೆಚ್ಚು ವಿಷಪೂರಿತ ಹಾವುಗಳು ಇವೆಯೆಂದು ಗುರುತಿಸಲಾಗಿದೆ. ಈ ದ್ವೀಪದ ಗಾತ್ರಕ್ಕೆ ಹೋಲಿಸಿದರೆ ಹಾವುಗಳ ಸಂಖ್ಯೆಯೇ ಅಧಿಕ. ಪ್ರತಿ ಚದರ ಮೀಟರ್ಗೆ ಕನಿಷ್ಠ ಒಂದರಂತೆ ಹಾವುಗಳನ್ನು ಇಲ್ಲಿ ಕಾಣಬಹುದು. ಹಾಗಾಗಿ ಈ ದ್ವೀಪ ಹೊಕ್ಕವರು ಹಿಂದಿರುಗುವುದು ಕನಸಿನ ಮಾತೇ ಸರಿ.
ಆದರೆ ಇಲ್ಲಿರುವ “ಗೋಲ್ಡನ್ ಲ್ಯಾನ್ಸ್ ಹೆಡ್” ಎಂದು ಸಾಮಾನ್ಯವಾಗಿ ಗುರುತಿಸಲ್ಪಡುವ “ಬತ್ರೋಸ್ಸ್ ಇಸ್ನಸುಲಾರಿಸ್” ಎಂಬ ಜಾತಿಯ ಹಾವಿನ ವಿಷ ಅತಿ ಘೋರ. ಈ ಹಾವಿನ ವಿಷವು ಮಾರಣಾಂತಿಕವಾಗಿದ್ದು, ದೇಹವನ್ನು ಹೊಕ್ಕಿಬಿಟ್ಟರೆ ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಹೊಂದಿದೆ. ಗರಿಷ್ಠ ನಾಲ್ಕು ಅಡಿ ಉದ್ದ ಇರುವ ಈ ಜಾತಿಯ ಹಾವುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಇವನ್ನು ವಿನಾಶದ ಅಂಚಿನಲ್ಲಿರುವ ಹಾವಿನ ಜಾತಿಯೆಂದು ಪರಿಗಣಿಸಿ ಕಾಪಾಡಲಾಗುತ್ತಿದೆ. ಈ ದ್ವೀಪಕ್ಕೆ ಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ, ಈ ದ್ವೀಪದಲ್ಲಿರುವ ಸ್ವಯಂಚಾಲಿತ ಲೈಟ್ ಹೌಸ್ ಅನ್ನು ನೌಕಾಪಡೆಯು ನೋಡಿಕೊಳ್ಳುತ್ತದೆ. ಹಾಗಾಗಿ ನಿರ್ವಹಣಾ ಸಿಬ್ಬಂದಿಗೆ ಹಾಗೂ ಪರಿಸರದ ಅಧ್ಯಯನ ಮಾಡುವ ಸಂಶೋಧಕರಿಗೆ ಸರಕಾರ ವಿಶೇಷ ಪರವಾನಗಿ ನೀಡಿದ್ದು, ಅವರಿಗೆ ಮಾತ್ರ ಈ ದ್ವೀಪದೊಳಗೆ ಹೋಗಲು ಅನುಮತಿ ಇದೆ.
ಮನುಷ್ಯರನ್ನೇ ಬೆಚ್ಚಿಬೀಳಿಸಿರುವ ವಿಶ್ವದ ಏಕೈಕ ದ್ವೀಪದಲ್ಲಿ ಪ್ರತಿವರ್ಷ ವಿಜ್ಞಾನಿಗಳಿಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿ ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಇದೇ ದ್ವೀಪದಲ್ಲಿ ಒಂದು ಲೈಟ್ ಹೌಸ್ ನಿರ್ಮಿಸಲಾಗಿದ್ದು ಇದರ ಉಸ್ತುವರಿಗಾಗಿ ಅಧಿಕಾರಿಯನ್ನು ಬ್ರೆಜಿಲ್ ಸರಕಾರ ನಿಯೋಜಿಸಿತ್ತು!! ಆದರೆ ಒಂದು ದಿನ ಆಕಸ್ಮಿಕವಾಗಿ ಅಧಿಕಾರಿ ವಾಸವಿದ್ದ ಮನೆಯ ಕಿಟಕಿ ಒಡೆದು ಸಾವಿರಾರು ಹಾವುಗಳು ಮನೆಗೆ ನುಗ್ಗಿ ಇಡೀ ಕುಟುಂಬವನ್ನೇ ನಿರ್ನಾಮ ಮಾಡಿತ್ತು!! ಈ ಭೀಕರ ಘಟನೆಯಿಂದಾಗಿ ಲೈಟ್ ಹೌಸ್ ಅನ್ನು ಶಾಶ್ವತವಾಗಿ ಮುಚ್ಚಲಾಯಿತು. ಅಂದಿನಿಂದ ಈ ಪ್ರದೇಶಗಳಲ್ಲಿ ಹಾವುಗಳದ್ದೇ ರಾಜ್ಯ ಭಾರ ಶುರುವಾಯಿತು ಎನ್ನಲಾಗಿದೆ!!
ಒಟ್ಟಿನಲ್ಲಿ 110 ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ ಈ ದ್ವೀಪದಲ್ಲಿ 4,30,000 ಕ್ಕೂ ಹೆಚ್ಚಿನ ವಿಷಪೂರಿತ ಹಾವುಗಳ ಮನೆಯಾಗಿ ಹೋಗಿದೆ. ಯಾರಾದರೂ ಈ ದ್ವೀಪದ ಒಳ ಹೊಕ್ಕರೇ ಸಾಕು…. ಅವರ ಪ್ರತಿ ಹೆಜ್ಜೆಯೂ ಸಾವಿಗೆ ಸಮೀಪವಾಗಿರುವುದಂತೂ ಅಕ್ಷರಶಃ ನಿಜ!!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.