ಸುದ್ದಿ

ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

159

ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ!   :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ‌ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ‌ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ‌ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ‌ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ.‌ ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ‌ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ‌ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ,          ಈ‌ ಗುಹೆಯ ಒಳಗೆ ಏಳು ಶಿವಲಿಂಗ ಇದೆ.‌ ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ‌ ಮಹಿಮೆ‌ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ….!ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.

  • ಸುದ್ದಿ

    31ನೇ ವರ್ಷಕ್ಕೆ ಕಾಲಿಟ್ಟ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ..!

    ಶ್ರದ್ಧೆ ಹಾಗೂ ಬದ್ಧತೆಗೆ ಹೆಸರಾಗಿರುವ ಆಟಗಾರ ವಿರಾಟ್ ಕೊಹ್ಲಿ. ಕ್ರಿಕೆಟ್ ಲೋಕದ ಹಲವು ಶ್ರೇಷ್ಠ ಆಟಗಾರರಿಂದ ‘ಕಿಂಗ್ ಕೊಹ್ಲಿ’ ಎಂದು ಕರೆಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿ, ಸಚಿನ್ ನಿರ್ವಿುಸಿದ್ದ ದಾಖಲೆಗಳನ್ನು ಒಂದೊಂದಾಗಿ ಹಿಮ್ಮೆಟ್ಟಿಸುತ್ತ ಸಾಗುತ್ತಿದ್ದಾರೆ. ಕ್ರಿಕೆಟ್ ಲೋಕವೇ ನಿಬ್ಬೆರಗಾಗುವಂತೆ ಮಾಡಿರುವ ಕಿಂಗ್ ಕೊಹ್ಲಿ ಇಂದು ಬರ್ತಡೇ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ನಾಯಕತ್ವ ಮತ್ತು ಬ್ಯಾಟಿಂಗ್​​​ನಲ್ಲಿ ಯಶಸ್ಸು ಕಂಡಿರುವ ವಿರಾಟ್​ ಕೊಹ್ಲಿ, ಸದ್ಯ ಕ್ರಿಕೆಟ್​​ನಿಂದ ಬಿಡುವು ಪಡೆದಿದ್ದು, ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇಂದು 31ನೇ ವರ್ಷದ ಜನ್ಮ…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಮಂಗಳವೊ ಅಮಂಗಳವೋ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…