ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ…

ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ ಸುಮ್ಮನಾಗಿದ್ದಾರೆ! ಎತ್ತಿನಹೊಳೆ, ಮೇಕೇದಾಟು, ಪರಮಶಿವಯ್ಯ, ಎರಗೋಳು ಮುಂತಾದ ಯೋಜನೆಗಳನ್ನು ತರುತ್ತೇವೆಂದು ನಮಗೆ ನೀರಿನ ಆಸೆ ಹುಟ್ಟಿಸಿ ಸುಮ್ಮನಾಗಿದ್ದಾರೆ, ಆ ಎಲ್ಲಾ ಯೋಜನೆಗೆ ಎಥೇಚ್ಚವಾಗಿ ಹಣ ಪೋಲಾಗಿದ್ದು ನಮಗೆ ತಿಳಿದಿದೆ.ಸದನದಲ್ಲಿ ರಮೇಶ್ ಕುಮಾರ್ ಅವರ ನಡೆಯ ಬಗ್ಗೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ….! ಸದನದಿಂದಾಚೆಗೆ ನಮ್ಮ ಜಿಲ್ಲೆಯ ರಾಜಕೀಯ ಮುತ್ಸದ್ದಿಗಳು ಎಂಬ ಗೌರವಕ್ಕೆ ಎಂದಿಗೂ ಅವರು ಚ್ಯುತಿ ಬರದಂತೆ ನಡೆದುಕೊಂಡ್ಡಿದ್ದಾರೆ,

ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯ ನೂರಾರು ಕೆರೆಗಳಿಗೆ ನೀರು ತರಲು ಅವರು ಪಟ್ಟ ಪಾಡು ಅಷ್ಟಿಷ್ಟಲ್ಲ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಾರೆ, ಸದನದಲ್ಲಿ ಅತ್ತಿದ್ದಾರೆ ಜಗಳವಾಡಿದ್ದಾರೆ ಸ್ವಂತ ಪಕ್ಷದವರನ್ನೇ ಎದುರು ಹಾಕಿಕೊಂಡಿದ್ದಾರೆ ಮತ್ತು ಸುಪ್ರೀಂಕೋರ್ಟ್ ಮಟ್ಟಿಲೇರಿ ಕೆಸಿ ವ್ಯಾಲಿ ಯೋಜನೆಯನ್ನು ಜಿಲ್ಲೆಗೆ ತಂದಿದ್ದಾರೆ.ಯೋಜನೆ ತಂದಿರುವುದಲ್ಲ ಅದನ್ನ ಸಮರ್ಪಕವಾಗಿ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ.. ಕಾರ್ಯಗತಗೊಳಿಸಿದ್ದಾರೆ ಕೂಡ…. ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ..

ನೀರಿಲ್ಲ ನೀಲಗಿರಿ ಮರ ಹಾಕೋಣ, ನೀರಿಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಿ ಕೆಲಸಕ್ಕೆ ಕಳಿಸೋಣ. ನೀರಿಲ್ಲ ಸಾಲ ಜಾಸ್ತಿಯಾಗಿ ತೀರಿಸಲಾಗುತ್ತಿಲ್ಲ ಸಾಯೋಣ ಎಂಬ ಮಾತುಗಳು ರೈತರ ಬಾಯಿಂದ ಕೇಳಿದ್ದೇವೆ ನೀರಿಲ್ಲ ಎಂಬ ನೋವನ್ನೂ ಅನುಭವಿಸಿದ್ದೇವೆ… ಈ ಯೋಜನೆಯಿಂದ ಆ ಮಾತುಗಳು ಇನ್ನು ನಾವು ಕೇಳಲ್ಲ ಅನ್ನಿಸುತ್ತೆ.. ಎಲ್ಲಾ ಕೆರೆಗಳು ತುಂಬುವ ಲಕ್ಷಣ ಕಾಣಿಸುತ್ತಿದೆ ಮತ್ತು ಅಂತರ್ಜಲದ ಮಟ್ಟ ಏರಿಕೆಯಾಗುತ್ತದೆ ಎಂಬ ನಂಬಿಕೆ ಇದೆ..
ನಂಬಿ ಇನ್ನ ಎರಡು ಮೂರುವರ್ಷಗಳಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳುಮತ್ತಷ್ಟು ಗರಿಗೆದರುತ್ತದೆ ಜಿಲ್ಲೆಯ ರೈತರ ಆರ್ಥಿಕಪರಿಸ್ಥಿತಿ ಸುಧಾರಣೆ ಆಗುತ್ತದೆ ವ್ಯವಸಾಯಕ್ಕೆನೀರಿಲ್ಲ ಎಂದು ಊರಿಂದಾಚೆ ಇರುವಟೆಕ್ಕಿಗಳೂ ವಿವಿಧ ಕ್ಷೇತ್ರಗಳಲ್ಲಿರುವ ಉದ್ಯೋಗಿಗಳುಮತ್ತೆ ತನ್ನೂರಿಗೆ ಮರಳಿ ವ್ಯವಸಾಯ ಶುರುಮಾಡುತ್ತಾರೆ..ಆ ಹಳೆಯ ವೈಭವಕ್ಕೆಮರಳುತ್ತಾರೆ.. ಕೆಸಿ ವ್ಯಾಲಿ ಯೋಜನೆಯಹರಿಕಾರ, ಜಿಲ್ಲೆಯ ಭಗೀರಥ ರಮೇಶ್ಕುಮಾರ್ ಅವರಿಗೆ ಹಾಗೂ ಈಯೋಜನೆ ಕಾರ್ಯರೂಪಕ್ಕೆ ತರಲು ಶ್ರಮಿಸಿದ ಎಲ್ಲಾಮಾಜಿಗಳಿಗೂ ಹಾಲಿಗಳಿಗೂ ಮತ್ತು ಎಲ್ಲಾ ಪಕ್ಷಗಳಮುಖಂಡರಿಗೂ ಧನ್ಯವಾದಗಳು .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…