ದೇವರು

‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

5338

ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

ಯಾರೂ ಈ ಚಿತ್ರದ ಸೃಷ್ಟಿಕರ್ತ?

ಕರಣ್ ಆಚಾರ್ಯ ಮೂಲತಃ ಕಾಸರಗೋಡು ಜಿಲ್ಲೆಯವರು. ಸದ್ಯ ಮಂಗಳೂರಿನ ಕಂಪೆನಿಯೊಂದರಲ್ಲಿ ಆ್ಯನಿಮೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಯಾರು ಕರಣ್ ಆಚಾರ್ಯ..?

ಕಾಸರಗೋಡು ಮೂಲದ ಕರಣ್ ಆಚಾರ್ಯ ಚಿಕ್ಕವಯಸ್ಸಿನಿಂದಲೇ ಡ್ರಾಯಿಂಗ್ ಸೇರಿದಂತೆ ಇನ್ನಿತರ ಕಲೆಯಲ್ಲಿ ಆಸಕ್ತಿ ಇದ್ದವರು. ಇದಕ್ಕಾಗಿ ಅವರು ಕಾಸರಗೋಡಿನ ” ರಿದಂ ಸ್ಕೂಲ್ ಆಫ್ ಆರ್ಟ್” ಶಾಲೆಯಲ್ಲಿ ಪದವಿಯನ್ನು ಸಹ ಪಡೆದರು. ನಂತರ ತ್ರಿಶೂರ್ನಲ್ಲಿ ಅನಿಮೇಶನ್ ಅಭ್ಯಾಸ ಮಾಡಿದ್ದಾರೆ.

ಕಳೆದ ವರ್ಷ ಕಾಸರಗೋಡಿನ ಕುಂಬ್ಳೆಯಲ್ಲಿ ಹಿಂದೂ ಸಂಘಟನೆಯ ಯುವಕರು ತಮ್ಮ ಸಂಘಟನೆಗಾಗಿ ವಿಭಿನ್ನ ರೀತಿಯ ಲಾಂಛನ ಮಾಡಿಕೊಡಿ ಎಂದು ಹೇಳಿದ್ದರು. ನಾನು ಭಜರಂಗಿಯ ಚಿತ್ರ ಬಿಡಿಸಿಕೊಟ್ಟಿದ್ದೆ. ಅದು ಅವರಿಗೆ ತುಂಬಾ ಇಷ್ಟವಾಗಿತ್ತು. ಈ ಲಾಂಛನವನ್ನು ಕೆಲವರು ವಾಟ್ಸಾಪ್ ಡಿಪಿ ಮಾಡಿಕೊಂಡರು.


ವಾಟ್ಸಾಪ್ ಡಿಪಿ ಮಾಡುವಾಗ ಭಜರಂಗಿಯ ಮುಖ ಮಾತ್ರ ಕಾಣಿಸಿಕೊಳ್ಳುತ್ತದೆ. ಫುಲ್ ಫೋಟೋ ಬರಲ್ಲ ನೋಡಿ. ಹಾಗೆ ಒಬ್ಬರಿಂದ ಒಬ್ಬರಿಗೆ ಅದು ಶೇರ್ ಆಗುತ್ತಾ ಬಂತು. ಆಮೇಲೆ ನಮ್ಮೂರಿನ ಹುಡುಗರು ಆ ಚಿತ್ರವನ್ನು ಬೈಕ್ ನಲ್ಲಿ ಹಾಕಿಸಿಕೊಂಡ್ರು.

ನಮ್ಮ ಹುಡುಗರೇ ಅಲ್ವಾ… ಹಾಕಿಸಿಕೊಳ್ಳಲಿ ಅದಕ್ಕೇನಂತೆ ಎಂದು ನಾನೂ ಸುಮ್ಮನಿದ್ದೆ. ಆಮೇಲೆ ಗೊತ್ತಾಯ್ತು, ಇದು ನಮ್ಮೂರು ಬಿಟ್ಟು ಬೇರೆ ಊರಿನಲ್ಲಿಯೂ ಕ್ರೇಜ್ ಹುಟ್ಟಿಸಿದೆ ಅಂತ. ಕಳೆದ ವರ್ಷ ಬಿಡಿಸಿದ ಚಿತ್ರ ಈಗ ವೈರಲ್ ಆಗುತ್ತಿದೆ. ಈ ಬಗ್ಗೆ ತುಂಬಾ ಖುಷಿಯೆನಿಸುತ್ತಿದೆ.

‘ಹನುಮಂತ ಸಾಮಾನ್ಯವಾಗಿ ವಿನೀತನಾಗಿ ಕಾಣಿಸಿಕೊಳ್ಳುತ್ತಾನೆ. ನೀವೇಕೆ ಹೀಗೆ ಚಿತ್ರಿಸಿದಿರಿ…’ ಎಂದು ಅನೇಕರು ಕೇಳುತ್ತಾರೆ.

ಒಬ್ಬ ಕಲಾವಿದನಾಗಿ ಹನುಮಾನ್‌ಗೆ ಯಾವ ರೂಪ ಬೇಕಾದರೂ ಕೊಡಬಹುದು. ರಾಮ– ರಾವಣ ಯುದ್ಧದಲ್ಲಿ ಅವ ಉಗ್ರರೂಪಿಯಾಗಿರುತ್ತಾನೆ. ಲಂಕಾದಹನದ ವೇಳೆಯೂ ಅವನು ಉಗ್ರರೂಪದಲ್ಲಿರುತ್ತಾನೆ. ಆದರೆ ರಾಮನ ಜತೆ ಇರುವಾಗ ಮಾತ್ರ ಅವನು ಶಾಂತರೂಪಿ. ಬಿಡುವು ಸಿಕ್ಕಾಗಲೆಲ್ಲಾ ಶಾಂತರೂಪದ ಹನುಮಂತನ ಚಿತ್ರ ರಚಿಸಬಹುದು. ಈ ಹಿಂದೆ ಶಾಂತರೂಪದ ಹನುಮಂತನ ಚಿತ್ರ ಬಿಡಿಸಿ ಸಾಮಾಜಿಕ ತಾಣದಲ್ಲಿ ಅಪ್‌ಲೋಡ್ ಮಾಡಿದ್ದೆ. ಅದು ಸುದ್ದಿಯಾಗಲಿಲ್ಲ. ಆದರೆ ಉಗ್ರರೂಪಿ ಹನುಮ ಎಲ್ಲರನ್ನೂ ಆಕರ್ಷಿಸಿಬಿಟ್ಟ.

ಮೀಸೆಯಿರುವ ಶಿವನ ಚಿತ್ರ ಬಿಡಿಸಿದಾಗ ಶಿವನಿಗೆ ಮೀಸೆಯಿದೆಯಾ? ಎಂದು ಕೆಲವರು ಕೇಳಿದ್ರು. ಯಾಕೆ ಇರಬಾರದು? ಇಲ್ಲಿಯವರೆಗೆ ಶಿವನ ಕಲಾಕೃತಿಯಲ್ಲಿ ಮೀಸೆ ಇರಲಿಲ್ಲ. ಹಾಗಾಗಿಯೇ ಮೀಸೆ ಇರುವ ಶಿವನನ್ನು ಸೃಷ್ಟಿಸಿದೆ. ಒಬ್ಬ ಕಲಾವಿದನ ಮನಸ್ಸಿನಲ್ಲಿ ಯಾವ ಭಾವನೆ ಮೂಡುತ್ತದೋ ಅದನ್ನೇ ಅವನು ಕುಂಚದ ಮೂಲಕ ಹೇಳುತ್ತಾನೆ ಅಲ್ಲವೇ? ಹನುಮ ಹಿಟ್ ಆಯ್ತು.

ನಮ್ಮೂರಲ್ಲಿ ನಮ್ಮ ಹುಡುಗರಿಗಾಗಿ ಆ ಚಿತ್ರ ಬಿಡಿಸಿದ್ದು. ಇದು ಇಷ್ಟೊಂದು ಸದ್ದು ಮಾಡುತ್ತದೆ ಎಂದು ಊಹಿಸಿರಲಿಲ್ಲ. ಚಿತ್ರ ವೈರಲ್ ಆದ ಮೇಲೆ ಕಾಪಿರೈಟ್ ಮಾಡುವುದಕ್ಕಾಗುವುದಿಲ್ಲವಲ್ಲಾ . ಆದ್ರೆ ಜನ ಅದು ನನ್ನ ಕಲಾಕೃತಿ ಎಂದು ಜನ ಗುರುತಿಸಿದ್ದಾರಲ್ಲಾ, ನನಗೆ ಆ ಖುಷಿಯಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…