ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ.
ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ.
►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ
ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್) ’ನ ಮೇಲೆ ಹೆಚ್ಚುವರಿ ಒತ್ತಡವುಂಟಾಗುತ್ತದೆ. ಈ ಸ್ನಾಯುವು ಜಠರದಲ್ಲಿಯ ಆಮ್ಲ ಇತ್ಯಾದಿಗಳು ಅನ್ನನಾಳವನ್ನು ಪ್ರವೇಶಿಸುವುದನ್ನು ತಡೆಯುತ್ತದೆ. ಅದರ ಮೇಲೆ ಹೆಚ್ಚುವರಿ ಒತ್ತಡವುಂಟಾದಾಗ ಅದರ ಕಾರ್ಯದಲ್ಲಿ ವ್ಯತ್ಯಯಗಳುಂಟಾಗುತ್ತವೆ.
►ಕಡಿಮೆ ಕಾರ್ಬೊಹೈಡ್ರೇಟ್ ಇರುವ ಆಹಾರ ಸೇವಿಸಿ
ಬೊಜ್ಜುದೇಹಿಗಳು ಕಡಿಮೆ ಕಾರ್ಬೊಹೈಡ್ರೇಟ್ಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸುವುದು ಎದೆಯುರಿಯನ್ನು ತಗ್ಗಿಸಲು ನೆರವಾಗುತ್ತದೆ ಎಂದು ಹಲವಾರು ಅಧ್ಯಯನಗಳು ಬೆಟ್ಟುಮಾಡಿವೆ. ಅತಿಯಾದ ಕಾರ್ಬೊಹೈಡ್ರೇಟ್ಗಳ ಸೇವನೆಯಿಂದ ಹೊಟ್ಟೆಯಲ್ಲಿ ವಾಯು ಸಂಗ್ರಹಗೊಳ್ಳುತ್ತದೆ ಮತ್ತು ಹೊಟ್ಟೆಯುಬ್ಬರ ವುಂಟಾಗುತ್ತದೆ ಹಾಗೂ ಇದು ಎದೆಯುರಿಗೆ ಕಾರಣವಾಗುತ್ತದೆ.
►ಆಹಾರವನ್ನು ಸರಿಯಾಗಿ ಅಗಿದು ತಿನ್ನಿ
ಆಹಾರವನ್ನು ನಿಧಾನವಾಗಿ,ಚೆನ್ನಾಗಿ ಅಗಿದು ಸೇವಿಸಿದಾಗ ಅದು ಜೀರ್ಣ ರಸಗಳು ಆಹಾರವನ್ನು ವಿಭಜಿಸಲು ಮತ್ತು ಅದನ್ನು ಜೀರ್ಣಗೊಳಿಸಲು ಸಾಕಷ್ಟು ಸಮಯಾವಕಾಶವನ್ನು ನೀಡುತ್ತವೆ. ಆದರೆ ಅವಸರದಿಂದ ಊಟ ಮಾಡಿದಾಗ ಅದು ಸರಿಯಾಗಿ ಜೀರ್ಣಗೊಳ್ಳುವುದಿಲ್ಲ ಮತ್ತು ಇದು ಅಜೀರ್ಣ,ಆಮ್ಲೀಯತೆ ಹಾಗೂ ಎದೆಯುರಿಗೆ ಕಾರಣವಾಗುತ್ತದೆ.
►ತಡರಾತ್ರಿ ಆಹಾರ ಸೇವನೆ ಬೇಡ
ಹೊತ್ತಲ್ಲದ ಹೊತ್ತಿಗೆ ಊಟ ಮಾಡುವುದು ಜೀರ್ಣ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಲ್ಲೊಂದಾಗಿದೆ. ಕೆಲಸದ ಒತ್ತಡದಿಂದಲೋ ಅಥವಾ ಸಂಜೆಯ ಸಮಯದಲ್ಲಿ ಹೊಟ್ಟೆ ಬಿರಿಯುವುಷ್ಟು ತಿನಿಸುಗಳನ್ನು ಸೇವಿಸಿಯೋ ತಡರಾತ್ರಿಯಲ್ಲಿ ಊಟ ಮಾಡುವುದು ಎದೆಯುರಿಗೆ ಸುಲಭವಾಗಿ ತುತ್ತಾಗಿಸುತ್ತದೆ.
►ಹಸಿ ಈರುಳ್ಳಿಯಿಂದ ದೂರವಿರಿ
ಹೆಚ್ಚಿನ ಜನರು ಊಟದೊಂದಿಗೆ ಹಸಿ ಈರುಳ್ಳಿಯನ್ನು ಅಥವಾ ಅದನ್ನು ಸಲಾಡ್ನೊಂದಿಗೆ ಸೇರಿಸಿಕೊಂಡು ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ನಿಮಗೆ ಆಮ್ಲೀಯತೆಯ ಸಮಸ್ಯೆಯಿದ್ದರೆ ಹಸಿ ಈರುಳ್ಳಿಯಿಂದ ದೂರವಿರಿ,ಏಕೆಂದರೆ ಅದು ಎದೆಯುರಿ ಮತ್ತು ತೇಗಿನ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಹಸಿ ಈರುಳ್ಳಿಯು ಹುದುಗು ಬರುವ ನಾರನ್ನು ಹೆಚ್ಚಿನ ಪ್ರಮಾಣದಲ್ಲಿ ಒಳಗೊಂಡಿರುತ್ತದೆ ಮತ್ತು ಇದು ಜೀರ್ಣ ಸಂದರ್ಭದಲ್ಲಿ ಹೆಚ್ಚು ಅನಿಲವನ್ನು ಉತ್ಪಾದಿಸುತ್ತದೆ. ಅಲ್ಲದೆ ಹಸಿ ಈರುಳ್ಳಿಯಲ್ಲಿನ ಸಂಯುಕ್ತಗಳು ಅನ್ನನಾಳದ ಒಳಪದರವನ್ನು ಕೆರಳಿಸುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತವೆ.
►ಕಾರ್ಬನೀಕೃತ ಪಾನೀಯಗಳನ್ನು ನಿವಾರಿಸಿ
ಸೋಡಾದಂತಹ ಕಾರ್ಬನೀಕೃತ ಪಾನೀಯಗಳು ಎಲ್ಇಎಸ್ನ್ನು ತಾತ್ಕಾಲಿಕವಾಗಿ ದುರ್ಬಲಗೊಳಿಸುತ್ತವೆ ಮತ್ತು ಆಮ್ಲ ಹಿಮ್ಮುಖ ಹರಿವಿನಿಂದಾಗಿ ಪದೇ ಪದೇ ತೇಗನ್ನುಂಟು ಮಾಡುತ್ತವೆ. ಈ ಪಾನೀಯಗಳಲ್ಲಿರುವ ಕಾರ್ಬನ್ ಡೈಯಾಕ್ಸೈಡ್ ಅನ್ನನಾಳವನ್ನು ಪ್ರವೇಶಿಸುವ ಆಮ್ಲದ ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಇವೆಲ್ಲ ಎದೆಯುರಿಗೆ ಕಾರಣವಾಗುತ್ತವೆ.
►ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಚ್ಯೂವಿಂಗ್ ಗಮ್ ಬಳಸಿ
ಸಕ್ಕರೆ ರಹಿತ ಚ್ಯೂಯಿಂಗ್ ಗಮ್ ಆಮ್ಲೀಯತೆಯ ಸಮಸ್ಯೆಯನ್ನು ನಿಭಾಯಿಸಲು ನೆರವಾಗುತ್ತದೆ ಎಂದು ಹಲವಾರು ಅಧ್ಯಯನಗಳು ತೋರಿಸಿವೆ. ಗಮ್ನ್ನು ಅಗಿಯುವಾಗ ಅದು ಹೆಚ್ಚಿನ ಪ್ರಮಾಣದಲ್ಲಿ ಜೊಲ್ಲು ಉತ್ಪತ್ತಿಯಾಗುವಂತೆ ಮಾಡುತ್ತದೆ ಮತ್ತು ಇದು ಅನ್ನನಾಳದಲ್ಲಿಯ ಹೆಚ್ಚುವರಿ ಆಮ್ಲವನ್ನು ನಿವಾರಿಸುತ್ತದೆ.
►ಕಾಫಿಯ ಸೇವನೆ ಮಿತವಾಗಿರಲಿ
ಆಮ್ಲ ಹಿಮ್ಮುಖ ಹರಿವಿಗೆ ಕಾರಣವಾಗಿರುವ ಆಹಾರಗಳ ಸೇವನೆಯಿಂದ ದೂರವಿರುವುದು ಎದೆಯುರಿಯನ್ನು ತಡೆಯಲು ಪ್ರಮುಖ ಮಾರ್ಗಗಳಲ್ಲೊಂದಾಗಿದೆ. ಕಾಫಿ ಇಂತಹ ಆಹಾರಗಳಲ್ಲಿ ಸೇರಿದೆ. ಕಾಫಿಯು ಎಲ್ಇಎಸ್ನ್ನು ತಾತ್ಕಾಲಿಕವಾಗಿ ದುರ್ಬಲಗೊಳಿಸುತ್ತದೆ ಮತ್ತು ಇದು ಆಮ್ಲ ಹಿಮ್ಮುಖ ಹರಿವಿನ ಅಪಾಯವನ್ನು ಹೆಚ್ಚಿಸುತ್ತದೆ.
►ಮದ್ಯಪಾನ ಬೇಡ
ಮದ್ಯಪಾನ ಆರೋಗ್ಯಕ್ಕೆ ಕೆಟ್ಟದ್ದು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ ಮತ್ತು ವ್ಯಕ್ತಿಯು ಎದೆಯುರಿಯಿಂದ ಬಳಲುತ್ತಿದ್ದರೆ ಅದು ಇನ್ನೂ ಕೆಟ್ಟದ್ದು. ಮದ್ಯವು ಆಮ್ಲ ಹಿಮ್ಮುಖ ಹರಿವಿನ ಅಪಾಯವನ್ನು ಹೆಚ್ಚಿಸುವುದಷ್ಟೇ ಅಲ್ಲ, ಸ್ಥಿತಿಯನ್ನೂ ಇನ್ನಷ್ಟು ಹದಗೆಡಿಸುತ್ತದೆ. ಅದು ಜಠರಾಮ್ಲಗಳ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಮತ್ತು ಆಮ್ಲವನ್ನು ನಿವಾರಿಸುವ ಎಲ್ಇಎಸ್ನ ಸಾಮರ್ಥ್ಯವನ್ನು ಕುಂದಿಸುತ್ತದೆ.
►ಆಹಾರ ಸೇವಿಸಿದ ತಕ್ಷಣ ವ್ಯಾಯಾಮ ಬೇಡ
ವ್ಯಾಯಮವು ನಾವು ಸೇವಿಸಿದ ಆಹಾರವು ಜೀರ್ಣಗೊಳ್ಳಲು ನೆರವಾಗುತ್ತದೆ,ಆದರೆ ಆಹಾರ ಸೇವಿಸಿದ ತಕ್ಷಣ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ. ಹಾಗೆ ಮಾಡಿದರೆ ಜೀರ್ಣಕ್ರಿಯೆಗೆ ವ್ಯತ್ಯಯವುಂಟಾಗುತ್ತದೆ ಮತ್ತು ಅನ್ನನಾಳದಲ್ಲಿ ಆಮ್ಲ ಸಂಗ್ರಹಗೊಳ್ಳುತ್ತದೆ. ಇದು ಎದೆಯುರಿಗೆ ಕಾರಣವಾಗುತ್ತದೆ ಮತ್ತು ಈಗಾಗಲೇ ಎದೆಯುರಿಯಿಂದ ಬಳಲುತ್ತಿದ್ದರೆ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೀಗಾಗಿ ವ್ಯಾಯಾಮದಲ್ಲಿ ತೊಡಗಿಕೊಳ್ಳುವ ಮುನ್ನ ತನ್ನಲ್ಲಿರುವುದನ್ನು ಖಾಲಿ ಮಾಡಲು ಜಠರಕ್ಕೆ ಸ್ವಲ್ಪ ಸಮಯಾವಕಾಶ ನೀಡಿ.
►ಊಟವಾದ ತಕ್ಷಣ ನಿದ್ರಿಸಬೇಡಿ
ಊಟ ಮತ್ತು ನಿದ್ರೆಯ ನಡುವೆ ಕನಿಷ್ಠ ಮೂರು ಗಂಟೆಗಳ ಅಂತರವನ್ನು ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಊಟವಾದ ತಕ್ಷಣ ಹಾಸಿಗೆಯನ್ನು ಸೇರಿಕೊಂಡರೆ ಎಲ್ಇಎಸ್ ಮೇಲಿನ ಒತ್ತಡ ಹೆಚ್ಚುತ್ತದೆ ಮತ್ತು ಆಮ್ಲ ಹಿಮ್ಮುಖ ಹರಿವಿಗೆ ಸುಲಭದ ಗುರಿಯಾಗಿಸುತ್ತದೆ. ಊಟ ಮತ್ತು ನಿದ್ರೆಯ ಮಧ್ಯೆ ಅಂತರವನ್ನು ಕಾಯ್ದುಕೊಳ್ಳುವುದು ಆಹಾರವನ್ನು ಜೀರ್ಣಗೊಳಿಸಲು ಜಠರಕ್ಕೆ ನೆರವಾಗುತ್ತದೆ ಮತ್ತು ಎದೆಯುರಿಯನ್ನು ತಡೆಯುತ್ತದೆ.
►ಹಾಸಿಗೆಯ ತಲೆಭಾಗ ಎತ್ತರವಾಗಿರಲಿ
ವಿಶೇಷವಾಗಿ ರಾತ್ರಿಗಳಲ್ಲಿ ಎದೆಯುರಿಯುಂಟಾಗುತ್ತಿದ್ದರೆ ಅದಕ್ಕೆ ನಿಮ್ಮ ಹಾಸಿಗೆಯ ಭಂಗಿಯನ್ನು ದೂರಬೇಕಾಗುತ್ತದೆ. ಹಾಸಿಗೆಯ ತಲೆಭಾಗವನ್ನು ಎತ್ತರಿಸುವುದರಿಂದ ಜಠರಾಮ್ಲದ ನಿವಾರಣೆ ಉತ್ತಮಗೊಳ್ಳುತ್ತದೆ ಮತ್ತು ಆಮ್ಲ ಹಿಮ್ಮುಖ ಹರಿವಿನ ಆವರ್ತನಗಳನ್ನು ಕಡಿಮೆ ಮಾಡುತ್ತದೆ ಎನ್ನುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ.
►ಬಲಮಗ್ಗುಲಾಗಿ ನಿದ್ರಿಸಬೇಡಿ
ನೀವು ಮಲಗುವ ಭಂಗಿಯು ಜೀರ್ಣಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಎಂದಾದರೂ ಯೋಚಿಸಿದ್ದೀರಾ? ಎಡಮಗ್ಗುಲಾಗಿ ಮಲಗುವುದು ಎದೆಯುರಿಯನ್ನು ತಡೆಯುವ ಜೊತೆಗೆ ಒಳ್ಳೆಯ ನಿದ್ರೆಯನ್ನೂ ನೀಡುತ್ತದೆ. ಬಲಮಗ್ಗುಲಾಗಿ ಮಲಗುವುದು ಆಮ್ಲ ಹಿಮ್ಮುಖ ಹರಿವನ್ನು ಹೆಚ್ಚಿಸುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಬಲಮಗ್ಗುಲಾಗಿ ಮಲಗುವುದರಿಂದ ಎಲ್ಇಎಸ್ ಮೂಲಕ ಆಮ್ಲ ಸೋರಿಕೆಯ ಸಾಧ್ಯತೆಯು ಹೆಚ್ಚಾಗಿರುತ್ತದೆ ಮತ್ತು ಇದು ಎದೆಯುರಿಯ ಅಪಾಯವನ್ನು ಹೆಚ್ಚಿಸುತ್ತದೆ.
►ದೇಹದ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸಿ
ನೀವು ಅಗತ್ಯಕ್ಕಿಂತ ಹೆಚ್ಚಿನ ದೇಹತೂಕವನ್ನು ಹೊಂದಿದ್ದರೆ ಮತ್ತು ಆಮ್ಲ ಹಿಮ್ಮುಖ ಹರಿವಿನಿಂದ ಬಳಲುತ್ತಿದ್ದರೆ ತೂಕವನ್ನು ಕಡಿಮೆ ಮಾಡಿಕೊಳ್ಳುವುದು ನಿಮ್ಮ ಆದ್ಯತೆಯಾಗಿರಬೇಕು. ಅತಿಯಾದ ಕೊಬ್ಬು,ವಿಶೇಷವಾಗಿ ಹೊಟ್ಟೆಯ ಭಾಗದಲ್ಲಿಯ ಕೊಬ್ಬು ಜಠರ ಮತ್ತು ಎಲ್ಇಎಸ್ ಮೇಲೆ ಒತ್ತಡವನ್ನುಂಟು ಮಾಡುತ್ತದೆ, ಇದರಿಂದಾಗಿ ಜಠರಾಮ್ಲವು ಮೇಲ್ಮುಖವಾಗಿ ತಳ್ಳಲ್ಪಡುತ್ತದೆ ಮತ್ತು ಎದೆಯುರಿಗೆ ಕಾರಣವಾಗುತ್ತದೆ.
►ನಿಮ್ಮ ಔಷಧಿಗಳನ್ನು ಪರಿಶೀಲಿಸಿ ಕೆಲವು ಔಷಧಿಗಳು ಆಮ್ಲ ಸಂಗ್ರಹಗೊಳ್ಳಲು ಅಥವಾ ಅನ್ನನಾಳದ ಉರಿಯೂತಕ್ಕೆ ಕಾರಣವಾಗುತ್ತವೆ ಮತ್ತು ಇದು ಎದೆಯುರಿಯನ್ನುಂಟು ಮಾಡುತ್ತದೆ ಅಥವಾ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೀಗಾಗಿ ವೈದ್ಯರು ನಿಮಗೆ ಸೂಚಿಸಿರುವ ಔಷಧಿಗಳು ಎದೆಯುರಿಯಂತಹ ಅಡ್ಡಪರಿಣಾಮಗಳನ್ನು ಹೊಂದಿವೆಯೇ ಎನ್ನುವುದನ್ನು ಅವರ ಬಳಿ ಕೇಳಿ ತಿಳಿದುಕೊಳ್ಳಿ. ಲಕ್ಷಣಗಳು ಮುಂದುವರಿದರೆ ಎದೆಯುರಿಯಿಂದ ಪಾರಾಗಲು ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು ಬುದ್ಧಿವಂತಿಕೆಯಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…