ಸುದ್ದಿ

ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

57

ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.


ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್‌ಬಿಐ ಕಾನೂನುಗಳ ಪ್ರಕಾರವ್ಯಾಲೆಟ್‌ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ. 


ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್‌ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್‌ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್‌ಗಳು ಈಗಾಗಲೇ ಫೋನ್‌ಪೆಯಲ್ಲಿ ಆಫ್‌ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್‌ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್‌ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್‌ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್‌ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.

ಫೋನ್‌ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್‌ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ :  ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್‌ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್‌ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್‌ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್‌ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…